<p><strong>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಜೀವವೈವಿಧ್ಯದ ತಾಣವಾಗಿರುವ ತಾಲ್ಲೂಕಿನ ಆನೇಕಲ್ಲು ಗ್ರಾಮ ಸಮೀಪದ ಐತಿಹಾಸಿಕ ಗುಡ್ಡದ ತಿಮ್ಮಪ್ಪನ ದೇವಸ್ಥಾನದ ಅರಣ್ಯ ಪ್ರದೇಶದಲ್ಲಿ ಸ್ಫೋಟಕಗಳನ್ನು ಬಳಸಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ.</p>.<p>ಹೊಸಪೇಟೆ ಪ್ರಾದೇಶಿಕ ವಲಯಕ್ಕೆ ಸೇರಿದ ದಶಮಾಪುರ ಗಸ್ತು ಕಾಯ್ದಿಟ್ಟ ಅರಣ್ಯ ಪ್ರದೇಶ ಇದಾಗಿದ್ದು, ಮೂರು ಸಾವಿರ ಎಕರೆ ಪ್ರದೇಶದಲ್ಲಿ ಕುರುಚಲು ಕಾಡು ಇದೆ. ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿ ಜೊತೆಗೆ, ವನ್ಯಜೀವಿಗಳಿಗೆ ತೊಂದರೆಯಾಗುತ್ತಿದೆ. </p>.<p>ಈ ಪ್ರದೇಶದಲ್ಲಿ ಅಪರೂಪದ ಸೈಕಾಸ್ ಪ್ರಭೇದದ ಸಸ್ಯಗಳು, ಔಷಧೀಯ ಗುಣದ ಕಾರೆಹಣ್ಣು, ಬಿಕ್ಕೆಹಣ್ಣು, ಕವಳೆಹಣ್ಣುಗಳ ಗಿಡಗಳು ನೈಸರ್ಗಿಕವಾಗಿ ಬೆಳೆದಿವೆ.</p>.<p>ಚಿರತೆ, ಕರಡಿ, ತೋಳ, ನರಿ, ಚಿಪ್ಪು ಹಂದಿ, ಮುಳ್ಳು ಹಂದಿ, ಕಾಡು ಹಂದಿ, ಕಾಡು ಬೆಕ್ಕು, ಕೊಂಡುಕುರಿ, ಪುನುಗು ಬೆಕ್ಕು, ಉಡ ಸೇರಿದಂತೆ ಹಲವು ಕಾಡುಪ್ರಾಣಿಗಳ ಆವಾಸ ಸ್ಥಾನ ಇದಾಗಿದೆ. ವಲಸೆ ಬಾನಾಡಿಗಳು, ಹಲವು ಬಗೆಯ ಚಿಟ್ಟೆಗಳೂ ಕಂಡು ಬರುತ್ತವೆ.</p>.<p>‘ಇಲ್ಲಿ ಕಲ್ಲುಗಣಿಗಾರಿಕೆ ಸ್ಥಗಿತಗೊಂಡರೆ ಮಾತ್ರ ಜೀವವೈವಿಧ್ಯದ ಉಳಿವು ಸಾಧ್ಯ’ ಎನ್ನುತ್ತಾರೆ ಪರಿಸರ ಪ್ರೇಮಿ ಕೊಟ್ರೇಶ್ ತಳವಾರ.</p>.<p>ಈ ಪ್ರದೇಶದಲ್ಲಿ ಆರು ತಿಂಗಳಿನಿಂದ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಪರಿಸರವಾದಿಗಳ ಒತ್ತಾಯ.</p>.<div><blockquote>ತಾಲ್ಲೂಕಿನಲ್ಲಿ 14 ಸಾವಿರ ಎಕರೆ ಅರಣ್ಯ ಪ್ರದೇಶ ಇದೆ. ಆದರೆ ಅರಣ್ಯ ಇಲಾಖೆ ಕಚೇರಿ ಇಲ್ಲ. ಕಚೇರಿ ಸ್ಥಾಪಿಸಿ ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸಬೇಕು.</blockquote><span class="attribution">–ಜಿ.ಪ್ರವೀಣ್ಕುಮಾರ್, ಹಂಪಾಪಟ್ಟಣ ನಿವಾಸಿ</span></div>.<div><blockquote>ತಿಮ್ಮಪ್ಪನ ಗುಡ್ಡದ ಬಳಿ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿಲ್ಲ. ಈ ಕುರಿತು ಪರಿಶೀಲನೆಗೆ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳನ್ನು ಕಳುಹಿಸಲಾಗುವುದು </blockquote><span class="attribution">–ಆರ್.ಕವಿತಾ, ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಜೀವವೈವಿಧ್ಯದ ತಾಣವಾಗಿರುವ ತಾಲ್ಲೂಕಿನ ಆನೇಕಲ್ಲು ಗ್ರಾಮ ಸಮೀಪದ ಐತಿಹಾಸಿಕ ಗುಡ್ಡದ ತಿಮ್ಮಪ್ಪನ ದೇವಸ್ಥಾನದ ಅರಣ್ಯ ಪ್ರದೇಶದಲ್ಲಿ ಸ್ಫೋಟಕಗಳನ್ನು ಬಳಸಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ.</p>.<p>ಹೊಸಪೇಟೆ ಪ್ರಾದೇಶಿಕ ವಲಯಕ್ಕೆ ಸೇರಿದ ದಶಮಾಪುರ ಗಸ್ತು ಕಾಯ್ದಿಟ್ಟ ಅರಣ್ಯ ಪ್ರದೇಶ ಇದಾಗಿದ್ದು, ಮೂರು ಸಾವಿರ ಎಕರೆ ಪ್ರದೇಶದಲ್ಲಿ ಕುರುಚಲು ಕಾಡು ಇದೆ. ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿ ಜೊತೆಗೆ, ವನ್ಯಜೀವಿಗಳಿಗೆ ತೊಂದರೆಯಾಗುತ್ತಿದೆ. </p>.<p>ಈ ಪ್ರದೇಶದಲ್ಲಿ ಅಪರೂಪದ ಸೈಕಾಸ್ ಪ್ರಭೇದದ ಸಸ್ಯಗಳು, ಔಷಧೀಯ ಗುಣದ ಕಾರೆಹಣ್ಣು, ಬಿಕ್ಕೆಹಣ್ಣು, ಕವಳೆಹಣ್ಣುಗಳ ಗಿಡಗಳು ನೈಸರ್ಗಿಕವಾಗಿ ಬೆಳೆದಿವೆ.</p>.<p>ಚಿರತೆ, ಕರಡಿ, ತೋಳ, ನರಿ, ಚಿಪ್ಪು ಹಂದಿ, ಮುಳ್ಳು ಹಂದಿ, ಕಾಡು ಹಂದಿ, ಕಾಡು ಬೆಕ್ಕು, ಕೊಂಡುಕುರಿ, ಪುನುಗು ಬೆಕ್ಕು, ಉಡ ಸೇರಿದಂತೆ ಹಲವು ಕಾಡುಪ್ರಾಣಿಗಳ ಆವಾಸ ಸ್ಥಾನ ಇದಾಗಿದೆ. ವಲಸೆ ಬಾನಾಡಿಗಳು, ಹಲವು ಬಗೆಯ ಚಿಟ್ಟೆಗಳೂ ಕಂಡು ಬರುತ್ತವೆ.</p>.<p>‘ಇಲ್ಲಿ ಕಲ್ಲುಗಣಿಗಾರಿಕೆ ಸ್ಥಗಿತಗೊಂಡರೆ ಮಾತ್ರ ಜೀವವೈವಿಧ್ಯದ ಉಳಿವು ಸಾಧ್ಯ’ ಎನ್ನುತ್ತಾರೆ ಪರಿಸರ ಪ್ರೇಮಿ ಕೊಟ್ರೇಶ್ ತಳವಾರ.</p>.<p>ಈ ಪ್ರದೇಶದಲ್ಲಿ ಆರು ತಿಂಗಳಿನಿಂದ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಪರಿಸರವಾದಿಗಳ ಒತ್ತಾಯ.</p>.<div><blockquote>ತಾಲ್ಲೂಕಿನಲ್ಲಿ 14 ಸಾವಿರ ಎಕರೆ ಅರಣ್ಯ ಪ್ರದೇಶ ಇದೆ. ಆದರೆ ಅರಣ್ಯ ಇಲಾಖೆ ಕಚೇರಿ ಇಲ್ಲ. ಕಚೇರಿ ಸ್ಥಾಪಿಸಿ ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸಬೇಕು.</blockquote><span class="attribution">–ಜಿ.ಪ್ರವೀಣ್ಕುಮಾರ್, ಹಂಪಾಪಟ್ಟಣ ನಿವಾಸಿ</span></div>.<div><blockquote>ತಿಮ್ಮಪ್ಪನ ಗುಡ್ಡದ ಬಳಿ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿಲ್ಲ. ಈ ಕುರಿತು ಪರಿಶೀಲನೆಗೆ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳನ್ನು ಕಳುಹಿಸಲಾಗುವುದು </blockquote><span class="attribution">–ಆರ್.ಕವಿತಾ, ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>