ಭಾನುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೀಸಲಾತಿಗೆ ಸಂಬಂಧಿಸಿದಂತೆ ಹೋರಾಟ ನಡೆಯುತ್ತಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ಸಮುದಾಯ ಮತ್ತು ಸರ್ಕಾರ ಎರಡು ಕಣ್ಣುಗಳಿದ್ದಂತೆ. ಯಾವ ಕಣ್ಣು ಬೇಕು ಎಂದು ಕೇಳಿದರೆ ಏನು ಹೇಳಲಿ’ ಎಂದು ಪ್ರಶ್ನಿಸಿದರು.