ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿರ್ಮಿಸಿರುವ ಕೈಗಾರಿಕಾ ಪ್ರದೇಶಗಳಲ್ಲಿರುವ ಬೃಹತ್ ಉದ್ದಿಮೆಗಳಿಂದಲೂ ಜಲ, ವಾಯು ಮತ್ತು ಪರಿಸರ ಮಾಲಿನ್ಯ ನಡೆಯುತ್ತಿದೆ. ಅವುಗಳ ಮೇಲೂ ನಿಯಂತ್ರಣ ಕ್ರಮಕ್ಕೆ ಅವಕಾಶ ಇರಬೇಕು. ಇಲ್ಲವಾದರೆ ಇತರ ಉದ್ದಿಮೆಗಳ ಮೇಲೆ ಕ್ರಮ ಕೈಗೊಂಡು, ಮಾಲಿನ್ಯ ತಡೆಯುವುದು ಕಷ್ಟವಾಗುತ್ತದೆ ಎಂದು ಪ್ರಾಧಿಕಾರ ಹಾಗೂ ಸಮಿತಿಗಳ ಸದಸ್ಯರು ಹೇಳಿದರು. ಅದಕ್ಕೆ ಪೂರಕವಾಗಿ ಆದೇಶ ಹೊರಡಿಸುವ ಭರವಸೆ ನೀಡಿದ ಸಚಿವರು, ಪ್ರಸ್ತಾವ ಸಲ್ಲಿಸಲು ನಿರ್ದೇಶನ ನೀಡಿದರು.