ಬೆಂಗಳೂರು: 'ಈ ಹಿಂದಿನ ಸರ್ಕಾರದ ಯೋಜನೆಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ನಾವೇ ಆರೋಪ ಮಾಡಿದ್ದೆವು. ಅದೆಲ್ಲವನ್ನೂ ಪರಿಶೀಲನೆ ಮಾಡ್ತೇವೆ. ಯಾರ ಮೇಲೂ ಸೇಡು ತೀರಿಸಿ ಕೊಳ್ಳುವುದಕ್ಕಾಗಿಯಲ್ಲ. ಆದರೆ ವ್ಯವಸ್ಥೆಯನ್ನು ಸರಿಪಡಿಸುವ ಸಲುವಾಗಿ ತನಿಖೆ ನಡೆಸುವ ಕುರಿತು ಗಮನಹರಿಸುತ್ತೇವೆ' ಎಂದು ನೂತನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, 'ನಮ್ಮ ಇಲಾಖೆಯಲ್ಲಿ ಸಾಕಷ್ಟು ಸವಾಲುಗಳಿವೆ. ಇದನ್ನು ಖಂಡಿತ ನಿಭಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡ್ತೇನೆ. ಜನರಿಗೆ ಸಮಾಧಾನವಾಗುವ ರೀತಿಯಲ್ಲಿ ಕೆಲಸ ಮಾಡ್ತೇನೆ' ಎಂದರು.