ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವನ್ಯಜೀವಿ ವಸ್ತುಗಳನ್ನು 2 ತಿಂಗಳಲ್ಲಿ ಸರ್ಕಾರಕ್ಕೆ ಒಪ್ಪಿಸಬೇಕು: ಸಚಿವ ಖಂಡ್ರೆ

Published 29 ಅಕ್ಟೋಬರ್ 2023, 12:51 IST
Last Updated 29 ಅಕ್ಟೋಬರ್ 2023, 12:51 IST
ಅಕ್ಷರ ಗಾತ್ರ

ಬೀದರ್‌: ‘ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಇಟ್ಟುಕೊಂಡವರು ಎರಡು ತಿಂಗಳಲ್ಲಿ ವಾಪಸ್‌ ಕೊಡಲೇಬೇಕು. ಇಂತಹದ್ದೊಂದು ಪ್ರಸ್ತಾವ ನಮ್ಮ ಮುಂದಿದ್ದು, ಸೋಮವಾರ (ಅ.30) ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಾರ ಬಳಿಯಾದರೂ ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳಿದ್ದರೆ ವಾಪಸ್‌ ಕೊಡಬೇಕಾಗುತ್ತದೆ. ಯಾರು ಕೂಡ ಅವರ ಬಳಿ ಇಟ್ಟುಕೊಳ್ಳಲು ಬರುವುದಿಲ್ಲ. ಈ ಬಗ್ಗೆ ಸಿ.ಎಂ. ಜೊತೆಗೂ ಚರ್ಚಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT