ಬೇರೆ ಬೇರೆ ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳ ಕುಲಸಚಿವರು ಸರ್ಕಾರಿ ವಾಹನಗಳಲ್ಲಿ ಬೆಂಗಳೂರಿಗೆ ಬರುವುದು, ರಾಜಕಾರಣಿಗಳ ಹಿಂದೆ ಸುತ್ತುವ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ‘ಅಧಿಕೃತ ಕಾರ್ಯಕ್ರಮ ಅಥವಾ ಅಧಿಕೃತ ಆಹ್ವಾನವಿಲ್ಲದೆ ಯಾವುದೇ ವಿಶ್ವವಿದ್ಯಾಲಯದ ಕುಲಪತಿಗಳು ಮತ್ತು ಕುಲಸಚಿವರು ವಿಧಾನಸೌಧಕ್ಕೆ ಬರದಂತೆ ತಡೆಯಲು ಆದೇಶ ಹೊರಡಿಸಲಾಗುವುದು’ ಎಂದರು.