<p><strong>ಮಡಿಕೇರಿ</strong>: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರು ಮುಖ್ಯಮಂತ್ರಿ ಆಗಬೇಕು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.</p>.<p>ರಾಜ್ಯದಲ್ಲಿ ದಲಿತ ನಾಯಕರು ಮುಖ್ಯಮಂತ್ರಿ ಆಗಬಾರದು ಎಂದೇನಿಲ್ಲ. ಆದರೆ, ಅದಕ್ಕೆ ಅವಕಾಶಗಳು, ಸನ್ನಿವೇಶಗಳು ಬರಬೇಕಿದೆ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>ದಲಿತರೇ ಕಾಂಗ್ರೆಸ್ನ ಬೆನ್ನೆಲುಬು ಎಂಬುದು ಹೈಕಮಾಂಡ್ಗೆ ತಿಳಿದಿದೆ. ಬೆನ್ನೆಲುಬು ಕಳೆದುಕೊಂಡು ಪಕ್ಷ ಬಲವಾಗಿ ಇರಲು ಸಾದ್ಯವಿಲ್ಲ. ಹೀಗಾಗಿ, ಬೆನ್ನೆಲುಬನ್ನು ಬಲಪಡಿಸಬೇಕು ಎಂದು ಪ್ರತಿಪಾದಿಸಿದರು.</p>.<p>ದಲಿತರು ಗಣನೀಯ ಪ್ರಮಾಣದಲ್ಲಿ ಕರ್ನಾಟಕದಲ್ಲಿ ಇದ್ದಾರೆ. ಅವರು ಸದಾ ಕಾಂಗ್ರೆಸ್ಗೆ ಬೆನ್ನೆಲುಬುವಾಗಿ ನಿಂತಿದ್ದಾರೆ. ಆದರೆ, ದಲಿತ ನಾಯಕರು ಸುಮ್ಮನಿದ್ದು, ಬೇರೆಯವರು ಮುಖ್ಯಮಂತ್ರಿಯಾಗಬೇಕು ಎಂಬ ಚರ್ಚೆ ನಡೆದಿದೆ ಎಂದರು.</p>.<p>ದಲಿತರು ಮುಖ್ಯಮಂತ್ರಿ ಅಗಬೇಕು ಎಂಬುದು ಹೈಕಮಾಂಡ್ ಗಮನದಲ್ಲಿಟ್ಟುಕೊಂಡಿದೆ. ಸಿದ್ದರಾಮಯ್ಯ ಇರುವ ತನಕ ಅವರೇ ಮುಖ್ಯಮಂತ್ರಿ. ನಂತರದ ದಿನಗಳಲ್ಲಿ ಎಲ್ಲರೂ ಸೇರಿ ದಲಿತರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿದ್ದರಾಮಯ್ಯ ಅವರಿಂದ ಹಿಡಿದು ಎಲ್ಲರೂ ಸೇರಿ ಸೂಕ್ತವಾದ ದಲಿತ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು. ಇದರಲ್ಲಿ ಯಾವುದೇ ಗೊಂದಲಗಳು ಆಗಬಾರದು. ಅದು ಎಲ್ಲರ ಆಸೆ ಎಂದರು.</p>.<p>ಡಿ.ಕೆ.ಶಿವಕುಮಾರ್ ಅವರ ಹೈಕಮಾಂಡ್ ತನ್ನ ಶ್ರಮಕ್ಕೆ ಸ್ಥಾನಮಾನವನ್ನು ಕೊಡುತ್ತದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಪ್ರತಿಯೊಬ್ಬರಲ್ಲೂ ಅಸೆ, ಆಕಾಂಕ್ಷೆಗಳು ಇರುತ್ತದೆ. ಅದಕ್ಕೆ ತಪ್ಪು ಎಂದು ಹೇಳಲು ಅಗುವುದಿಲ್ಲ. ಆದರೆ, ಹೈಕಮಾಂಡ್ ಪ್ರತಿಯೊಂದನ್ನೂ ಪರಾಮರ್ಶೆ ಮಾಡುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<p>ಬಿಜೆಪಿ ಶಾಸಕರೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಿಕ್ಕಿ ಬಿದ್ದಿದ್ದಾರೆ. ಈಗ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರು ಮುಖ್ಯಮಂತ್ರಿ ಆಗಬೇಕು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.</p>.<p>ರಾಜ್ಯದಲ್ಲಿ ದಲಿತ ನಾಯಕರು ಮುಖ್ಯಮಂತ್ರಿ ಆಗಬಾರದು ಎಂದೇನಿಲ್ಲ. ಆದರೆ, ಅದಕ್ಕೆ ಅವಕಾಶಗಳು, ಸನ್ನಿವೇಶಗಳು ಬರಬೇಕಿದೆ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>ದಲಿತರೇ ಕಾಂಗ್ರೆಸ್ನ ಬೆನ್ನೆಲುಬು ಎಂಬುದು ಹೈಕಮಾಂಡ್ಗೆ ತಿಳಿದಿದೆ. ಬೆನ್ನೆಲುಬು ಕಳೆದುಕೊಂಡು ಪಕ್ಷ ಬಲವಾಗಿ ಇರಲು ಸಾದ್ಯವಿಲ್ಲ. ಹೀಗಾಗಿ, ಬೆನ್ನೆಲುಬನ್ನು ಬಲಪಡಿಸಬೇಕು ಎಂದು ಪ್ರತಿಪಾದಿಸಿದರು.</p>.<p>ದಲಿತರು ಗಣನೀಯ ಪ್ರಮಾಣದಲ್ಲಿ ಕರ್ನಾಟಕದಲ್ಲಿ ಇದ್ದಾರೆ. ಅವರು ಸದಾ ಕಾಂಗ್ರೆಸ್ಗೆ ಬೆನ್ನೆಲುಬುವಾಗಿ ನಿಂತಿದ್ದಾರೆ. ಆದರೆ, ದಲಿತ ನಾಯಕರು ಸುಮ್ಮನಿದ್ದು, ಬೇರೆಯವರು ಮುಖ್ಯಮಂತ್ರಿಯಾಗಬೇಕು ಎಂಬ ಚರ್ಚೆ ನಡೆದಿದೆ ಎಂದರು.</p>.<p>ದಲಿತರು ಮುಖ್ಯಮಂತ್ರಿ ಅಗಬೇಕು ಎಂಬುದು ಹೈಕಮಾಂಡ್ ಗಮನದಲ್ಲಿಟ್ಟುಕೊಂಡಿದೆ. ಸಿದ್ದರಾಮಯ್ಯ ಇರುವ ತನಕ ಅವರೇ ಮುಖ್ಯಮಂತ್ರಿ. ನಂತರದ ದಿನಗಳಲ್ಲಿ ಎಲ್ಲರೂ ಸೇರಿ ದಲಿತರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿದ್ದರಾಮಯ್ಯ ಅವರಿಂದ ಹಿಡಿದು ಎಲ್ಲರೂ ಸೇರಿ ಸೂಕ್ತವಾದ ದಲಿತ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು. ಇದರಲ್ಲಿ ಯಾವುದೇ ಗೊಂದಲಗಳು ಆಗಬಾರದು. ಅದು ಎಲ್ಲರ ಆಸೆ ಎಂದರು.</p>.<p>ಡಿ.ಕೆ.ಶಿವಕುಮಾರ್ ಅವರ ಹೈಕಮಾಂಡ್ ತನ್ನ ಶ್ರಮಕ್ಕೆ ಸ್ಥಾನಮಾನವನ್ನು ಕೊಡುತ್ತದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಪ್ರತಿಯೊಬ್ಬರಲ್ಲೂ ಅಸೆ, ಆಕಾಂಕ್ಷೆಗಳು ಇರುತ್ತದೆ. ಅದಕ್ಕೆ ತಪ್ಪು ಎಂದು ಹೇಳಲು ಅಗುವುದಿಲ್ಲ. ಆದರೆ, ಹೈಕಮಾಂಡ್ ಪ್ರತಿಯೊಂದನ್ನೂ ಪರಾಮರ್ಶೆ ಮಾಡುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<p>ಬಿಜೆಪಿ ಶಾಸಕರೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಿಕ್ಕಿ ಬಿದ್ದಿದ್ದಾರೆ. ಈಗ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>