‘ಕಾಂಗ್ರೆಸ್ನವರಿಗೆ ರಾಮ– ಸೀತೆ ಎಲ್ಲರೂ ಟೂರಿಂಗ್ ಟಾಕೀಸ್ ಬೊಂಬೆಗಳಂತೆಯೇ ಕಾಣುತ್ತಾರೆ. ಹಿಂದೆ ಇವರೇ ರಾಮನನ್ನು ಕಾಲ್ಪನಿಕ ವ್ಯಕ್ತಿ, ಜನ್ಮ ಪ್ರಮಾಣ ಪತ್ರ ಇಲ್ಲ ಎಂದಿದ್ದರು. ಮುಸ್ಲಿಮರನ್ನು ಮತ ಬ್ಯಾಂಕ್ ಮಾಡಿಕೊಂಡು, ಹಿಂದೂಗಳನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿಸುವ ಗುಣ ಕಾಂಗ್ರೆಸ್ ರಕ್ತದಲ್ಲೇ ಇದೆ. ವಕೀಲರಾಗಿರುವ ಸಿದ್ದರಾಮಯ್ಯ ಅವರೇ ಸುಪ್ರೀಂಕೋರ್ಟ್ ತೀರ್ಪಿಗೆ ಬೆಲೆ ಕೊಡುವುದಿಲ್ಲ ಎನ್ನುತ್ತಾರೆ’ ಎಂದು ಅಶೋಕ ಹರಿಹಾಯ್ದರು.