<p><strong>ಬೆಂಗಳೂರು:</strong> ಬೆಳಗಾವಿ ಲೋಕಸಭೆ ಉಪಚುನಾವಣೆ ಸ್ಪರ್ಧಿಸುವ ಉದ್ದೇಶವೂ ಇಲ್ಲ, ಖಾತೆ ಬದಲಾವಣೆಯೂ ಇಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಹೊಸ ಕೈಗಾರಿಕಾ ನೀತಿಯ ಬಿಡುಗಡೆ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಪ್ರಮುಖ ನಾಯಕರ ಸಮಿತಿ ಸಭೆಯಲ್ಲಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಚರ್ಚೆ ಆಗಿಲ್ಲ. ಚುನಾವಣೆ ಘೋಷಣೆ ಆದ ಬಳಿಕ ಆ ಕುರಿತು ಚರ್ಚೆ ನಡೆಯಲಿದೆ ಎಂದರು.</p>.<p>ಬೆಳಗಾವಿಯಿಂದ ಕಣಕ್ಕಿಳಿಯುವ ಬಗ್ಗೆ ಪಕ್ಷದಲ್ಲಿ ಯಾರೂ ನನಗೆ ಸೂಚಿಸಿಲ್ಲ. ನಾನೂ ಬಯಕೆ ವ್ಯಕ್ತಪಡಿಸಿಲ್ಲ. ನೀವೆ ಇಂತಹದ್ದನ್ನು ಸೃಷ್ಟಿ ಮಾಡಿ ಬಳಿಕ ಪ್ರಶ್ನೆ ಕೇಳುತ್ತೀರಿ ಎಂದು ಹೇಳಿದರು.</p>.<p>ಖಾತೆ ಬದಲಾವಣೆ ಆಗಬಹುದೇ ಎಂಬ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿ ಸೇರಿ ಯಾರೂ ನನ್ನ ಜತೆ ಚರ್ಚೆ ಮಾಡಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಮುಖ್ಯಮಂತ್ರಿಯವರ ಪರಮಾಧಿಕಾರ. ಖಾತೆ ಬದಲಾವಣೆ ಬಗ್ಗೆ ಎಲ್ಲೂ ಚರ್ಚೆಯೇ ಆಗಿಲ್ಲ. ಇದೂ ಕೂಡ ಮಾಧ್ಯಮದವರ ಸೃಷ್ಟಿ ಎಂದು ಶೆಟ್ಟರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಳಗಾವಿ ಲೋಕಸಭೆ ಉಪಚುನಾವಣೆ ಸ್ಪರ್ಧಿಸುವ ಉದ್ದೇಶವೂ ಇಲ್ಲ, ಖಾತೆ ಬದಲಾವಣೆಯೂ ಇಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಹೊಸ ಕೈಗಾರಿಕಾ ನೀತಿಯ ಬಿಡುಗಡೆ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಪ್ರಮುಖ ನಾಯಕರ ಸಮಿತಿ ಸಭೆಯಲ್ಲಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಚರ್ಚೆ ಆಗಿಲ್ಲ. ಚುನಾವಣೆ ಘೋಷಣೆ ಆದ ಬಳಿಕ ಆ ಕುರಿತು ಚರ್ಚೆ ನಡೆಯಲಿದೆ ಎಂದರು.</p>.<p>ಬೆಳಗಾವಿಯಿಂದ ಕಣಕ್ಕಿಳಿಯುವ ಬಗ್ಗೆ ಪಕ್ಷದಲ್ಲಿ ಯಾರೂ ನನಗೆ ಸೂಚಿಸಿಲ್ಲ. ನಾನೂ ಬಯಕೆ ವ್ಯಕ್ತಪಡಿಸಿಲ್ಲ. ನೀವೆ ಇಂತಹದ್ದನ್ನು ಸೃಷ್ಟಿ ಮಾಡಿ ಬಳಿಕ ಪ್ರಶ್ನೆ ಕೇಳುತ್ತೀರಿ ಎಂದು ಹೇಳಿದರು.</p>.<p>ಖಾತೆ ಬದಲಾವಣೆ ಆಗಬಹುದೇ ಎಂಬ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿ ಸೇರಿ ಯಾರೂ ನನ್ನ ಜತೆ ಚರ್ಚೆ ಮಾಡಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಮುಖ್ಯಮಂತ್ರಿಯವರ ಪರಮಾಧಿಕಾರ. ಖಾತೆ ಬದಲಾವಣೆ ಬಗ್ಗೆ ಎಲ್ಲೂ ಚರ್ಚೆಯೇ ಆಗಿಲ್ಲ. ಇದೂ ಕೂಡ ಮಾಧ್ಯಮದವರ ಸೃಷ್ಟಿ ಎಂದು ಶೆಟ್ಟರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>