<p><strong>ಚಿಕ್ಕಮಗಳೂರು:</strong> ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ ರವಿ ಜೊತೆ ನಡೆದ ಜಟಾಪಟಿ ನಂತರ ಶನಿವಾರ ಮೊದಲ ಬಾರಿ ನಗರಕ್ಕೆ ಭೇಟಿ ನೀಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಬಾಗಿನ ನೀಡಲು ಮುಂದಾದರು.</p>.<p>ಈ ವಿಷಯ ತಿಳಿದ ಸಚಿವೆ ಕಾರು ನಿಲ್ಲಿಸದೆ ತೆರಳಿ ಬಾಗಿನ ನಿರಾಕರಿಸಿದರು. ಗ್ಯಾರಂಟಿ ಸಮಾವೇಶ ಮತ್ತು ಲಿಂಗಾಯತ ಸಮಾಜ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತಿಯಲ್ಲಿ ಭಾಗವಹಿಸಲು ಶನಿವಾರ ನಗರಕ್ಕೆ ಲಕ್ಷ್ಮಿ ಹೆಬ್ಬಾಳಕರ ಭೇಟಿ ನೀಡಿದ್ದರು.</p>.<p>ಬಿಜೆಪಿ ಕಾರ್ಯಕರ್ತೆಯರು ಅರಿಸಿನ-ಕುಂಕುಮ, ಹೂ, ಕಾಯಿ, ಎಲೆ, ಅಕ್ಕಿ-ಬೆಲ್ಲ, ಬಾಳೆಹಣ್ಣು, ಲಕ್ಷ್ಮಿ ವಿಗ್ರಹ ಹಿಡಿದು ಪ್ರವಾಸಿ ಮಂದಿರದ ಗೇಟ್ ಬಳಿ ಮೂರು ತಾಸಿಗೂ ಹೆಚ್ಚು ಕಾದಿದ್ದರು. ಅದೇ ಮಾರ್ಗದಲ್ಲಿ ಸಾಗಿದ ಸಚಿವೆ ಕಾರಿನಿಂದ ಇಳಿಯದೆ ಹೋದರು.</p>.<p>ಅಸಮಾಧಾನಗೊಂಡ ಕಾರ್ಯಕರ್ತೆಯರು 'ನಮ್ಮೂರಿಗೆ ಬಂದ ಹೆಣ್ಣು ಮಗಳಿಗೆ ಹಿಂದೂ ಸಂಪ್ರದಾಯದಂತೆ ಅರಿಸಿನ-ಕುಂಕುಮ ನೀಡಲು ಹೋಗಿದ್ದೆವು. ಬಾಗಿನ ಬಿಟ್ಟು ಹೋಗಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ' ಎಂದರು.</p>.<p>'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ಕುಂಕುಮ ಕಂಡರೆ ಇವರಿಗೂ ಭಯ ಇರಬಹುದು. ಅವರ ಮನೆಗೆ ಹೆಣ್ಣು ಮಕ್ಕಳು ಹೋದರೆ ಅವರಿಗೆ ಅರಿಶಿನ- ಕುಂಕುಮ ಕೊಡುವುದಿಲ್ಲ ಎನ್ನಿಸುತ್ತದೆ' ಎಂದು ನಗರಸಭೆ ಸದಸ್ಯೆ ಕವಿತಾ ಶೇಖರ್ ಹೇಳಿದರು.</p>.<p>ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬೋಳರಾಮೇಶ್ವರ ದೇಗುಲದಿಂದ ಎಐಟಿ ವೃತ್ತದವರೆಗೆ ಬೈಕ್ ಜಾಥಾ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಸಚಿವೆ, ‘ಬೆಳಗಾವಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡನೀಯ. ಇದು ಅಕ್ಷಮ್ಯ ತಪ್ಪು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಸಂತ್ರಸ್ತೆಯ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ' ಎಂದರು.</p>.<div><blockquote>ಸದನದಲ್ಲಿ ಮರ್ಯಾದೆ ಕಳೆದು ಮಾಡಬಾರದ ಅವಮಾನ ಮಾಡಿದ್ದಾರೆ. ಈಗ ಸೋಗಿನ ಬಾಗಿನದ ಅವಶ್ಯಕತೆ ನನಗೆ ಇಲ್ಲ </blockquote><span class="attribution">ಲಕ್ಷ್ಮಿ ಹೆಬ್ಬಾಳಕರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ ರವಿ ಜೊತೆ ನಡೆದ ಜಟಾಪಟಿ ನಂತರ ಶನಿವಾರ ಮೊದಲ ಬಾರಿ ನಗರಕ್ಕೆ ಭೇಟಿ ನೀಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಬಾಗಿನ ನೀಡಲು ಮುಂದಾದರು.</p>.<p>ಈ ವಿಷಯ ತಿಳಿದ ಸಚಿವೆ ಕಾರು ನಿಲ್ಲಿಸದೆ ತೆರಳಿ ಬಾಗಿನ ನಿರಾಕರಿಸಿದರು. ಗ್ಯಾರಂಟಿ ಸಮಾವೇಶ ಮತ್ತು ಲಿಂಗಾಯತ ಸಮಾಜ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತಿಯಲ್ಲಿ ಭಾಗವಹಿಸಲು ಶನಿವಾರ ನಗರಕ್ಕೆ ಲಕ್ಷ್ಮಿ ಹೆಬ್ಬಾಳಕರ ಭೇಟಿ ನೀಡಿದ್ದರು.</p>.<p>ಬಿಜೆಪಿ ಕಾರ್ಯಕರ್ತೆಯರು ಅರಿಸಿನ-ಕುಂಕುಮ, ಹೂ, ಕಾಯಿ, ಎಲೆ, ಅಕ್ಕಿ-ಬೆಲ್ಲ, ಬಾಳೆಹಣ್ಣು, ಲಕ್ಷ್ಮಿ ವಿಗ್ರಹ ಹಿಡಿದು ಪ್ರವಾಸಿ ಮಂದಿರದ ಗೇಟ್ ಬಳಿ ಮೂರು ತಾಸಿಗೂ ಹೆಚ್ಚು ಕಾದಿದ್ದರು. ಅದೇ ಮಾರ್ಗದಲ್ಲಿ ಸಾಗಿದ ಸಚಿವೆ ಕಾರಿನಿಂದ ಇಳಿಯದೆ ಹೋದರು.</p>.<p>ಅಸಮಾಧಾನಗೊಂಡ ಕಾರ್ಯಕರ್ತೆಯರು 'ನಮ್ಮೂರಿಗೆ ಬಂದ ಹೆಣ್ಣು ಮಗಳಿಗೆ ಹಿಂದೂ ಸಂಪ್ರದಾಯದಂತೆ ಅರಿಸಿನ-ಕುಂಕುಮ ನೀಡಲು ಹೋಗಿದ್ದೆವು. ಬಾಗಿನ ಬಿಟ್ಟು ಹೋಗಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ' ಎಂದರು.</p>.<p>'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ಕುಂಕುಮ ಕಂಡರೆ ಇವರಿಗೂ ಭಯ ಇರಬಹುದು. ಅವರ ಮನೆಗೆ ಹೆಣ್ಣು ಮಕ್ಕಳು ಹೋದರೆ ಅವರಿಗೆ ಅರಿಶಿನ- ಕುಂಕುಮ ಕೊಡುವುದಿಲ್ಲ ಎನ್ನಿಸುತ್ತದೆ' ಎಂದು ನಗರಸಭೆ ಸದಸ್ಯೆ ಕವಿತಾ ಶೇಖರ್ ಹೇಳಿದರು.</p>.<p>ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬೋಳರಾಮೇಶ್ವರ ದೇಗುಲದಿಂದ ಎಐಟಿ ವೃತ್ತದವರೆಗೆ ಬೈಕ್ ಜಾಥಾ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಸಚಿವೆ, ‘ಬೆಳಗಾವಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡನೀಯ. ಇದು ಅಕ್ಷಮ್ಯ ತಪ್ಪು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಸಂತ್ರಸ್ತೆಯ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ' ಎಂದರು.</p>.<div><blockquote>ಸದನದಲ್ಲಿ ಮರ್ಯಾದೆ ಕಳೆದು ಮಾಡಬಾರದ ಅವಮಾನ ಮಾಡಿದ್ದಾರೆ. ಈಗ ಸೋಗಿನ ಬಾಗಿನದ ಅವಶ್ಯಕತೆ ನನಗೆ ಇಲ್ಲ </blockquote><span class="attribution">ಲಕ್ಷ್ಮಿ ಹೆಬ್ಬಾಳಕರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>