<p><strong>ತುಮಕೂರು: </strong>‘ಮಾತುಗಳನ್ನು ವಿಕೃತಗೊಳಿಸಿ ಆ ಮಾತುಗಳಿಗೆ ತಮಗೆ ಬೇಕಾದಂತೆ ಅರ್ಥ ಕಲ್ಪಿಸಿ ತೇಜೋವಧೆ ಮಾಡುವ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶನಿವಾರ ಮಾಜಿ ಸಚಿವ ವೈ.ಕೆ.ರಾಮಯ್ಯ ಹೆಸರಿನಲ್ಲಿ ನೀಡುವ ಕೃಷಿಕ, ಕೃಷಿ ವಿಜ್ಞಾನಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ‘ಜನರು ಇಂದು ವಾಸ್ತವ ಸ್ಥಿತಿ ಅರ್ಥ ಮಾಡಿಕೊಳ್ಳುತ್ತಿಲ್ಲ. ಸತ್ಯ–ಸುಳ್ಳಿನ ಬಗ್ಗೆ ಯೋಚಿಸುತ್ತಿಲ್ಲ’ ಎಂದರು.</p>.<p>ಇಂದಿನ ರಾಜಕಾರಣ ಸಹ ತಪ್ಪು ದಿಕ್ಕಿಗೆ ಸಾಗುತ್ತಿದೆ. ರಾಜಕಾರಣ ಏಕೆ ಮಾಡುತ್ತಿದ್ದೇವೆ, ಯಾರಿಗಾಗಿ ಮಾಡುತ್ತಿದ್ದೇವೆ ಎನ್ನುವ ಪರಿವೇ<br />ರಾಜಕಾರಣಿಗಳಿಗೆ ಇಲ್ಲ. ಈ ಹಿಂದೆ ಇಂತಹ ಸ್ಥಿತಿ ಇರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣ ಟೊಳ್ಳು ಆಗುತ್ತಿರುವುದು ಬೇಸರದ ಸಂಗತಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಮಾತುಗಳನ್ನು ವಿಕೃತಗೊಳಿಸಿ ಆ ಮಾತುಗಳಿಗೆ ತಮಗೆ ಬೇಕಾದಂತೆ ಅರ್ಥ ಕಲ್ಪಿಸಿ ತೇಜೋವಧೆ ಮಾಡುವ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶನಿವಾರ ಮಾಜಿ ಸಚಿವ ವೈ.ಕೆ.ರಾಮಯ್ಯ ಹೆಸರಿನಲ್ಲಿ ನೀಡುವ ಕೃಷಿಕ, ಕೃಷಿ ವಿಜ್ಞಾನಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ‘ಜನರು ಇಂದು ವಾಸ್ತವ ಸ್ಥಿತಿ ಅರ್ಥ ಮಾಡಿಕೊಳ್ಳುತ್ತಿಲ್ಲ. ಸತ್ಯ–ಸುಳ್ಳಿನ ಬಗ್ಗೆ ಯೋಚಿಸುತ್ತಿಲ್ಲ’ ಎಂದರು.</p>.<p>ಇಂದಿನ ರಾಜಕಾರಣ ಸಹ ತಪ್ಪು ದಿಕ್ಕಿಗೆ ಸಾಗುತ್ತಿದೆ. ರಾಜಕಾರಣ ಏಕೆ ಮಾಡುತ್ತಿದ್ದೇವೆ, ಯಾರಿಗಾಗಿ ಮಾಡುತ್ತಿದ್ದೇವೆ ಎನ್ನುವ ಪರಿವೇ<br />ರಾಜಕಾರಣಿಗಳಿಗೆ ಇಲ್ಲ. ಈ ಹಿಂದೆ ಇಂತಹ ಸ್ಥಿತಿ ಇರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣ ಟೊಳ್ಳು ಆಗುತ್ತಿರುವುದು ಬೇಸರದ ಸಂಗತಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>