ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ದಾಖಲೆ ಒದಗಿಸದ ಕಾರಣ ಅವರಿಗೆ ನ್ಯಾಯಾಲಯದಿಂದ ಸಮನ್ಸ್ ಬಂತು, ಸಮನ್ಸ್ ಬಂದೂ ದಾಖಲೆ ಕೊಡದಿದ್ದರಿಂದ ವಾರಂಟ್ ಬಂತು. ಆರೋಪ ಮಾಡುವುದು ಸುಲಭ. ಬಳಿಕ ಅದನ್ನು ಜೀರ್ಣಿಸಿಕೊಳ್ಳುವ ಶಕ್ತಿಯೂ ಇರಬೇಕು. ಇದು ಇಷ್ಟಕ್ಕೆ ನಿಲ್ಲುವುದಿಲ್ಲ, ಕಾನೂನು ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕು ಅದೆಲ್ಲಾ ಮಾಡುವೆ’ ಎಂದರು.