ವಿಧಾನ ಪರಿಷತ್ನಲ್ಲಿ ಜೆಡಿಎಸ್ನ ಗೋವಿಂದರಾಜು ಪ್ರಶ್ನೆಗೆ ಮಂಗಳವಾರ ಉತ್ತರ ನೀಡಿದ ಅವರು, ‘ಬಿಇಎಂಎಲ್ ಬಳಿ ರಾಜ್ಯ ಸರ್ಕಾರ ಒದಗಿಸಿದ್ದ ಸುಮಾರು 12,500 ಎಕರೆ ಜಮೀನು ಬಳಕೆಯಾಗುತ್ತಿಲ್ಲ. ಈ ಜಮೀನು ಸೇರಿದಂತೆ ಕೆಲವು ಆಸ್ತಿಗಳನ್ನು ನಗದೀಕರಣ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಆದರೆ, ಕಾರ್ಖಾನೆಯನ್ನು ಪೂರ್ಣವಾಗಿ ಖಾಸಗೀಕರಣ ಮಾಡುತ್ತಿಲ್ಲ’ ಎಂದರು.