<p><strong>ಬೆಂಗಳೂರು: </strong>ಸಮ್ಮಿಶ್ರ ಸರ್ಕಾರದಲ್ಲಿ ಹಿರಿಯ ಶಾಸಕ ಎಂ.ಬಿ.ಪಾಟೀಲರಿಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಲಿಂಗಾಯತ ಮಠಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಗದುಗಿನ ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿ ಮತ್ತು ಇತರ ಸ್ವಾಮೀಜಿಗಳು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸಮುದಾಯದ ಅತ್ಯಂತ ಹಿರಿಯ ಶಾಸಕರಾರ ಎಂ.ಬಿ.ಪಾಟೀಲರನ್ನು ಹೊರಗಿಟ್ಟಿದ್ದು ಸರಿಯಲ್ಲ. ಅಲ್ಲದೆ, ಸಚಿವ ಸಂಪುಟದಲ್ಲಿ ಲಿಂಗಾಯತ ಶಾಸಕರಿಗೆ ಹೆಚ್ಚಿನ ಪ್ರಾತಿನಿಧ್ಯವೂ ಸಿಕ್ಕಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು.</p>.<p>ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳಿಸಿದ್ದ ಕಡತ ಹಿಂದಕ್ಕೆ ಬಂದಿಲ್ಲ. ಈ ಬಗ್ಗೆ ವದಂತಿ ಹರಡಿದೆ. ಅದರಲ್ಲಿ ಹುರುಳಿಲ್ಲ ಎಂದರು.</p>.<p>ಲಿಂಗಾಯತ ಮಹಾಸಭಾ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟವನ್ನು ಸಂಘಟಿಸಲಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಮಾಧ್ಯಮಗೋಷ್ಠಿಯಲ್ಲಿ ಭಾಲ್ಕಿಯ ಬಸವಲಿಂಗ ಪಟ್ಟದೇವರು, ನಾಗನೂರು ರುದ್ರಾಕ್ಷಿಮಠದ ಸಿದ್ದರಾಮ ಸ್ವಾಮೀಜಿ, ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಮ್ಮಿಶ್ರ ಸರ್ಕಾರದಲ್ಲಿ ಹಿರಿಯ ಶಾಸಕ ಎಂ.ಬಿ.ಪಾಟೀಲರಿಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಲಿಂಗಾಯತ ಮಠಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಗದುಗಿನ ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿ ಮತ್ತು ಇತರ ಸ್ವಾಮೀಜಿಗಳು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸಮುದಾಯದ ಅತ್ಯಂತ ಹಿರಿಯ ಶಾಸಕರಾರ ಎಂ.ಬಿ.ಪಾಟೀಲರನ್ನು ಹೊರಗಿಟ್ಟಿದ್ದು ಸರಿಯಲ್ಲ. ಅಲ್ಲದೆ, ಸಚಿವ ಸಂಪುಟದಲ್ಲಿ ಲಿಂಗಾಯತ ಶಾಸಕರಿಗೆ ಹೆಚ್ಚಿನ ಪ್ರಾತಿನಿಧ್ಯವೂ ಸಿಕ್ಕಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು.</p>.<p>ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳಿಸಿದ್ದ ಕಡತ ಹಿಂದಕ್ಕೆ ಬಂದಿಲ್ಲ. ಈ ಬಗ್ಗೆ ವದಂತಿ ಹರಡಿದೆ. ಅದರಲ್ಲಿ ಹುರುಳಿಲ್ಲ ಎಂದರು.</p>.<p>ಲಿಂಗಾಯತ ಮಹಾಸಭಾ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟವನ್ನು ಸಂಘಟಿಸಲಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಮಾಧ್ಯಮಗೋಷ್ಠಿಯಲ್ಲಿ ಭಾಲ್ಕಿಯ ಬಸವಲಿಂಗ ಪಟ್ಟದೇವರು, ನಾಗನೂರು ರುದ್ರಾಕ್ಷಿಮಠದ ಸಿದ್ದರಾಮ ಸ್ವಾಮೀಜಿ, ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>