ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗಲಭೆಗಳ ವೇಳೆ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸುವ ಮೂಲಕ ಸರ್ಕಾರ ಸಾಂತ್ವನ ಹೇಳುತ್ತದೆ. ಬಳಿಕ ಘಟನೆ ಕುರಿತು ತನಿಖೆ ನಡೆಸಲಾಗುತ್ತದೆ. ಅದೇ ರೀತಿ, ಮಂಗಳೂರಿನಲ್ಲಿ ನಡೆದ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೊದ ಅನುಸಾರ ಈ ಘಟನೆ ಪೂರ್ವನಿಯೋಜಿತವಾಗಿದೆ. ಈ ರೀತಿ ಗಲಭೆ ಸೃಷ್ಟಿಸುವುದನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧನಿರ್ದಾಕ್ಷಿಣ್ಯವಾಗಿಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆ ಕರಾವಳಿ ಭಾಗದಲ್ಲಿ ನಡೆಯಲು ಅವಕಾಶ ನೀಡುವುದಿಲ್ಲ’ ಎಂದರು.