<p><strong>ಬೆಂಗಳೂರು:</strong> ‘ಪೌರತ್ವ ತಿದ್ದುಪಡಿ ಕಾಯ್ದೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ದೇಶದ್ರೋಹಿ ಕಾನೂನಿನಡಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು.</p>.<p>ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗಲಭೆಗಳ ವೇಳೆ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸುವ ಮೂಲಕ ಸರ್ಕಾರ ಸಾಂತ್ವನ ಹೇಳುತ್ತದೆ. ಬಳಿಕ ಘಟನೆ ಕುರಿತು ತನಿಖೆ ನಡೆಸಲಾಗುತ್ತದೆ. ಅದೇ ರೀತಿ, ಮಂಗಳೂರಿನಲ್ಲಿ ನಡೆದ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೊದ ಅನುಸಾರ ಈ ಘಟನೆ ಪೂರ್ವನಿಯೋಜಿತವಾಗಿದೆ. ಈ ರೀತಿ ಗಲಭೆ ಸೃಷ್ಟಿಸುವುದನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧನಿರ್ದಾಕ್ಷಿಣ್ಯವಾಗಿಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆ ಕರಾವಳಿ ಭಾಗದಲ್ಲಿ ನಡೆಯಲು ಅವಕಾಶ ನೀಡುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪೌರತ್ವ ತಿದ್ದುಪಡಿ ಕಾಯ್ದೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ದೇಶದ್ರೋಹಿ ಕಾನೂನಿನಡಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು.</p>.<p>ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗಲಭೆಗಳ ವೇಳೆ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸುವ ಮೂಲಕ ಸರ್ಕಾರ ಸಾಂತ್ವನ ಹೇಳುತ್ತದೆ. ಬಳಿಕ ಘಟನೆ ಕುರಿತು ತನಿಖೆ ನಡೆಸಲಾಗುತ್ತದೆ. ಅದೇ ರೀತಿ, ಮಂಗಳೂರಿನಲ್ಲಿ ನಡೆದ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೊದ ಅನುಸಾರ ಈ ಘಟನೆ ಪೂರ್ವನಿಯೋಜಿತವಾಗಿದೆ. ಈ ರೀತಿ ಗಲಭೆ ಸೃಷ್ಟಿಸುವುದನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧನಿರ್ದಾಕ್ಷಿಣ್ಯವಾಗಿಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆ ಕರಾವಳಿ ಭಾಗದಲ್ಲಿ ನಡೆಯಲು ಅವಕಾಶ ನೀಡುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>