ರಾಜ್ಯ ಹೆದ್ದಾರಿ, ಸೇತುವೆಗಳು, ಕಟ್ಟಡಗಳು, ನಿರ್ವಹಣೆ, ದುರಸ್ತಿ ಸೇರಿದಂತೆ ಎಲ್ಲ ಕಾಮಗಾರಿಗಳಲ್ಲೂ ಬಾಕಿ ಉಳಿದುಕೊಂಡಿದೆ. ಆರ್ಥಿಕ ಸಂಕಷ್ಟದಲ್ಲಿರುವ ಗುತ್ತಿಗೆದಾರರ ಹಿತರಕ್ಷಣೆ ಮಾಡಲಾಗುವುದು. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳಿಗೆ ತಡೆ ನೀಡುವುದಿಲ್ಲ. ಹಿಂದಿನ ಸರ್ಕಾರ ಮಂಜೂರು ಮಾಡಿದ ಟೆಂಡರ್ ಆಗದ ಕಾಮಗಾರಿಗಳನ್ನು ಮರುಪರಿಶೀಲಿಸಲಾಗುವುದು ಎಂದು ಹೇಳಿದರು.