ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏನೋ ಹೇಳಲು ಹೋಗಿ ಶಿವಾನಂದ ಪಾಟೀಲ ಯಡವಟ್ಟು ಮಾಡಿಕೊಂಡಿದ್ದಾರೆ: ಸತೀಶ ಜಾರಕಿಹೊಳಿ

Published 25 ಡಿಸೆಂಬರ್ 2023, 12:28 IST
Last Updated 25 ಡಿಸೆಂಬರ್ 2023, 12:28 IST
ಅಕ್ಷರ ಗಾತ್ರ

ಬೆಳಗಾವಿ: ‘ಒಮ್ಮೊಮ್ಮೆ ಗಾಡಿಗಳು ಹೆಚ್ಚು ವೇಗವಾಗಿ ಓಡುತ್ತವೆ. ಆಗ ಅಪಘಾತವಾಗುತ್ತದೆ. ಎಲ್ಲ ಪಕ್ಷಗಳಲ್ಲೂ ಇದು ಸಾಮಾನ್ಯ. ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಏನೋ ಹೇಳಲು ಹೋಗಿ ಯಡವಟ್ಟು ಮಾಡಿದ್ದಾರೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬರಗಾಲ ಬರಲಿ ಎಂದು ಯಾರೂ ಬಯಸುವುದಿಲ್ಲ. ಬರಗಾಲದಿಂದ ರೈತರು ಮಾತ್ರವಲ್ಲ; ಗ್ರಾಹಕರು, ವ್ಯಾಪಾರಿಗಳೂ ಸಂಕಷ್ಟ ಎದುರಿಸುತ್ತಾರೆ. ದೇಶದ ಜಿಡಿಪಿ‌ ಮೇಲೂ ದೊಡ್ಡ ಪರಿಣಾಮ ಬೀರುತ್ತದೆ. ಶಿವಾನಂದ ಪಾಟೀಲ ಹಿರಿಯರು. ಅವರಿಗೆ ನಾನೇನೂ ಹೇಳುವುದಿಲ್ಲ’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT