<p><strong>ದಾವಣಗೆರೆ</strong>: ‘ಸಹಕಾರ ಬ್ಯಾಂಕ್ಗಳ ಮೂಲಕ33 ಲಕ್ಷ ರೈತರಿಗೆ ಸಾಲಸೌಲಭ್ಯ ಒದಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಕನಿಷ್ಠ 3 ಲಕ್ಷ ಹೊಸ ರೈತರಿಗೆ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸರ್ಕಾರಿ ಸವಲತ್ತುಗಳು ಪಡೆದವರಿಗೇ ಮತ್ತೆ ಸಿಗುತ್ತಿರುವ ದೂರುಗಳಿವೆ. ಈ ಬಾರಿ ಯಾವುದೇ ಸೌಲಭ್ಯ ಪಡೆಯದವರನ್ನು ಹೊಸ ರೈತರು ಎಂದು ಪರಿಗಣಿಸಲಾಗುವುದು’ ಎಂದರು.</p>.<p>‘ಕೃಷಿಕರಿಗೆ ವಿವಿಧ ಯೋಜನೆಗಳಡಿ ನೆರವು ಒದಗಿಸಲು ಬಜೆಟ್ನಲ್ಲಿ ₹ 24,000 ಕೋಟಿ ಅನುದಾನ ಇರಿಸಲಾಗಿದೆ. ಸಹಕಾರ ಸಂಘಗಳ ಮೂಲಕ ಸಾಲ ಮಂಜೂರು ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ’ ಎಂದರು.</p>.<p><strong>ಸಾಲದ ಮೊತ್ತ ದುಪ್ಪಟ್ಟು ಚಿಂತನೆ</strong></p>.<p>‘ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡುತ್ತಿರುವ ಶೂನ್ಯ ಬಡ್ಡಿ ದರದ ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲದ ಮೊತ್ತವನ್ನು ದುಪ್ಪಟ್ಟು ಮಾಡುವ ಚಿಂತನೆಯೂ ಇದೆ’ ಎಂದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಬಾರ್ಡ್ ಜೊತೆಗೆ ಚರ್ಚಿಸಿದ್ದಾರೆ. ರೈತರು ರಾಷ್ಟ್ರೀಕೃತ ಬ್ಯಾಂಕ್ಗಳ ಬದಲಿಗೆ ಸಹಕಾರ ಬ್ಯಾಂಕ್ಗಳಲ್ಲಿಯೇ ಸಾಲ ಪಡೆಯಬೇಕು ಎಂಬುದು ಇದರ ಉದ್ದೇಶ ಎಂದರು.</p>.<p>‘ಸಹಕಾರ ಬ್ಯಾಂಕ್ಗಳಲ್ಲಿ ಅವ್ಯವಹಾರದ ಆರೋಪಗಳು ಕೇಳಿಬರುತ್ತಿವೆ. ಇದನ್ನು ತಡೆಯಲು ಸಹಕಾರ ಕಾಯ್ದೆಗೆ ತಿದ್ದುಪಡಿ ತರಲಿದ್ದು, ಕಾಯ್ದೆಯನ್ನು ಇನ್ನಷ್ಟು ಬಲಪಡಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಸಹಕಾರ ಬ್ಯಾಂಕ್ಗಳ ಮೂಲಕ33 ಲಕ್ಷ ರೈತರಿಗೆ ಸಾಲಸೌಲಭ್ಯ ಒದಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಕನಿಷ್ಠ 3 ಲಕ್ಷ ಹೊಸ ರೈತರಿಗೆ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸರ್ಕಾರಿ ಸವಲತ್ತುಗಳು ಪಡೆದವರಿಗೇ ಮತ್ತೆ ಸಿಗುತ್ತಿರುವ ದೂರುಗಳಿವೆ. ಈ ಬಾರಿ ಯಾವುದೇ ಸೌಲಭ್ಯ ಪಡೆಯದವರನ್ನು ಹೊಸ ರೈತರು ಎಂದು ಪರಿಗಣಿಸಲಾಗುವುದು’ ಎಂದರು.</p>.<p>‘ಕೃಷಿಕರಿಗೆ ವಿವಿಧ ಯೋಜನೆಗಳಡಿ ನೆರವು ಒದಗಿಸಲು ಬಜೆಟ್ನಲ್ಲಿ ₹ 24,000 ಕೋಟಿ ಅನುದಾನ ಇರಿಸಲಾಗಿದೆ. ಸಹಕಾರ ಸಂಘಗಳ ಮೂಲಕ ಸಾಲ ಮಂಜೂರು ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ’ ಎಂದರು.</p>.<p><strong>ಸಾಲದ ಮೊತ್ತ ದುಪ್ಪಟ್ಟು ಚಿಂತನೆ</strong></p>.<p>‘ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡುತ್ತಿರುವ ಶೂನ್ಯ ಬಡ್ಡಿ ದರದ ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲದ ಮೊತ್ತವನ್ನು ದುಪ್ಪಟ್ಟು ಮಾಡುವ ಚಿಂತನೆಯೂ ಇದೆ’ ಎಂದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಬಾರ್ಡ್ ಜೊತೆಗೆ ಚರ್ಚಿಸಿದ್ದಾರೆ. ರೈತರು ರಾಷ್ಟ್ರೀಕೃತ ಬ್ಯಾಂಕ್ಗಳ ಬದಲಿಗೆ ಸಹಕಾರ ಬ್ಯಾಂಕ್ಗಳಲ್ಲಿಯೇ ಸಾಲ ಪಡೆಯಬೇಕು ಎಂಬುದು ಇದರ ಉದ್ದೇಶ ಎಂದರು.</p>.<p>‘ಸಹಕಾರ ಬ್ಯಾಂಕ್ಗಳಲ್ಲಿ ಅವ್ಯವಹಾರದ ಆರೋಪಗಳು ಕೇಳಿಬರುತ್ತಿವೆ. ಇದನ್ನು ತಡೆಯಲು ಸಹಕಾರ ಕಾಯ್ದೆಗೆ ತಿದ್ದುಪಡಿ ತರಲಿದ್ದು, ಕಾಯ್ದೆಯನ್ನು ಇನ್ನಷ್ಟು ಬಲಪಡಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>