ಬೆಂಗಳೂರು: 'ಮೊದಲ ಬಾರಿ ಸಚಿವರಾಗಿರುವವರನ್ನು ಹೊರತುಪಡಿಸಿ ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು. ಉಳಿದವರಿಗೆ ಅವಕಾಶ ಮಾಡಿಕೊಡಬೇಕು' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಸಲಹೆ ನೀಡಿದರು.
ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, 'ಹಳಬರು ಎರಡೂವರೆ ವರ್ಷಕ್ಕೆ ಇಳಿದು ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಆ ಮೂಲಕ ನಾವು ದೇಶದಲ್ಲಿ ಹೊಸ ಪರಂಪರೆಯನ್ನು ಆರಂಭಿಸಿದಂತಾಗುತ್ತದೆ. ಇದು ನನ್ನ ವೈಯಕ್ತಿಕ ಸಲಹೆ' ಎಂದರು.