<p><strong>ತುಮಕೂರು:</strong> ಬಿಜೆಪಿಗೆ ಮತ ನೀಡಿದವರು ನಿಜವಾದ ಮುಸ್ಲಿಂ ಅಲ್ಲ ಎಂದು ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಕೋಮುವಾದಿಯಾಗಿದ್ದು, ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದರು.</p>.<p>ಜಿನ್ನಾ ಸಂತತಿಯ ಜಮೀರ್ ಅಹ್ಮದ್ ಹೇಳಿಕೆಯಿಂದ ಸಮಾಜದಲ್ಲಿ ಸಾಮರಸ್ಯ ಹಾಳಾಗುತ್ತದೆ. ದೇಶದಲ್ಲಿ ಏಕತೆ ಕಾಪಾಡಿಕೊಳ್ಳಲು ಇಂತಹ ಹೇಳಿಕೆಗೆ ಕಡಿವಾಣ ಹಾಕಬೇಕು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯ ಮಾಡಿದರು.</p>.<p>ಸಮಾಜದಲ್ಲಿ ಸಾಮರಸ್ಯ ಕಾಪಾಡುವುದರ ಜೊತೆಗೆ ಹಿಂದು ಸಂಸ್ಕ್ರತಿಯನ್ನು ರಕ್ಷಿಸಬೇಕು. ಇಲ್ಲದೇ ಇದ್ದರೆ ನಾವು ಸಮುದ್ರದ ಪಾಲಾಗಬೇಕಾಗುತ್ತದೆ ಎಂದು ಹೇಳಿದರು.</p>.<p>ಶಾಸಕ ಬಸವನಗೌಡ ಪಾಟೀಲ್ ಅವರಿಗೆ ಜಮೀರ್ ಅಹ್ಮದ್ ಹೇಳಿಕೆಯ ಬಗ್ಗೆ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಲು ಮನವಿ ಮಾಡಿದ್ದೇನೆ ಎಂದು ಹೇಳಿದರು.</p>.<p>ಲವ್ ಜಿಹಾದ್ ನಾವು ಒಪ್ಪುವುದಿಲ್ಲ. ಇಂತಹ ಕೃತ್ಯ ನಡೆಸಲು ಮುಂದಾದಾಗ ಹತ್ತಾರು ಪ್ರಕರಣ ತಡೆದಿದ್ದೇವೆ ಎಂದು ಹೇಳಿದರು.</p>.<p>ಹಿಂದು ಮುಸ್ಲಿಮರು ಪ್ರೀತಿ ವಿಶ್ವಾಸದಿಂದ ಬದುಕಬೇಕು. ಅದನ್ನು ಮೀರಿ ಧಕ್ಕೆ ತರುವ ಕೆಲಸ ಮಾಡಬಾರದು. ಸಚಿವ ಜಮೀರ್ ಅಹ್ಮದ್ ಗೆ ಇದ್ಯಾವುದು ಗೊತ್ರಿಲ್ಲ. ಇಂತಹವರನ್ನು ಕಾಂಗ್ರೆಸ್ ಇನ್ನೂ ಸಚಿವ ಸ್ಥಾನದಲ್ಲಿ ಮುಂದುವರಿಸಿರುವುದು ಖಂಡನೀಯ ಎಂದು ಹರಿಹಾಯ್ದರು.</p>.<p>ಕಾಂಗ್ರೆಸ್ ನಾಯಕರು ಮಠ, ದೇವಸ್ಥಾನದ ಕಡೆ ಹೋಗ್ತಿದ್ದಾರೆ. ಕೆಟ್ಟಮೇಲೆ ಬುದ್ಧಿ ಬಂದಿದೆ. ನಾವು ಅಮರನಾಥ ಯಾತ್ರೆಗೆ ಹೋಗುವಾಗ ಕೋಮುವಾದಿಗಳು, ಜಾತಿವಾದಿಗಳು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದರು. ಈಗ ಅವರೇ ಅಮರನಾಥ ಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.</p>.<p><strong>* ಇದನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/no-muslim-can-vote-bjp-zameer-569015.html">ಬಿಜೆಪಿಗೆ ಮತ ನೀಡುವವರು ಮುಸ್ಲಿಂ ಆಗಿರಲು ಸಾಧ್ಯವಿಲ್ಲ: ಜಮೀರ್ ಅಹ್ಮದ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಬಿಜೆಪಿಗೆ ಮತ ನೀಡಿದವರು ನಿಜವಾದ ಮುಸ್ಲಿಂ ಅಲ್ಲ ಎಂದು ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಕೋಮುವಾದಿಯಾಗಿದ್ದು, ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದರು.</p>.<p>ಜಿನ್ನಾ ಸಂತತಿಯ ಜಮೀರ್ ಅಹ್ಮದ್ ಹೇಳಿಕೆಯಿಂದ ಸಮಾಜದಲ್ಲಿ ಸಾಮರಸ್ಯ ಹಾಳಾಗುತ್ತದೆ. ದೇಶದಲ್ಲಿ ಏಕತೆ ಕಾಪಾಡಿಕೊಳ್ಳಲು ಇಂತಹ ಹೇಳಿಕೆಗೆ ಕಡಿವಾಣ ಹಾಕಬೇಕು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯ ಮಾಡಿದರು.</p>.<p>ಸಮಾಜದಲ್ಲಿ ಸಾಮರಸ್ಯ ಕಾಪಾಡುವುದರ ಜೊತೆಗೆ ಹಿಂದು ಸಂಸ್ಕ್ರತಿಯನ್ನು ರಕ್ಷಿಸಬೇಕು. ಇಲ್ಲದೇ ಇದ್ದರೆ ನಾವು ಸಮುದ್ರದ ಪಾಲಾಗಬೇಕಾಗುತ್ತದೆ ಎಂದು ಹೇಳಿದರು.</p>.<p>ಶಾಸಕ ಬಸವನಗೌಡ ಪಾಟೀಲ್ ಅವರಿಗೆ ಜಮೀರ್ ಅಹ್ಮದ್ ಹೇಳಿಕೆಯ ಬಗ್ಗೆ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಲು ಮನವಿ ಮಾಡಿದ್ದೇನೆ ಎಂದು ಹೇಳಿದರು.</p>.<p>ಲವ್ ಜಿಹಾದ್ ನಾವು ಒಪ್ಪುವುದಿಲ್ಲ. ಇಂತಹ ಕೃತ್ಯ ನಡೆಸಲು ಮುಂದಾದಾಗ ಹತ್ತಾರು ಪ್ರಕರಣ ತಡೆದಿದ್ದೇವೆ ಎಂದು ಹೇಳಿದರು.</p>.<p>ಹಿಂದು ಮುಸ್ಲಿಮರು ಪ್ರೀತಿ ವಿಶ್ವಾಸದಿಂದ ಬದುಕಬೇಕು. ಅದನ್ನು ಮೀರಿ ಧಕ್ಕೆ ತರುವ ಕೆಲಸ ಮಾಡಬಾರದು. ಸಚಿವ ಜಮೀರ್ ಅಹ್ಮದ್ ಗೆ ಇದ್ಯಾವುದು ಗೊತ್ರಿಲ್ಲ. ಇಂತಹವರನ್ನು ಕಾಂಗ್ರೆಸ್ ಇನ್ನೂ ಸಚಿವ ಸ್ಥಾನದಲ್ಲಿ ಮುಂದುವರಿಸಿರುವುದು ಖಂಡನೀಯ ಎಂದು ಹರಿಹಾಯ್ದರು.</p>.<p>ಕಾಂಗ್ರೆಸ್ ನಾಯಕರು ಮಠ, ದೇವಸ್ಥಾನದ ಕಡೆ ಹೋಗ್ತಿದ್ದಾರೆ. ಕೆಟ್ಟಮೇಲೆ ಬುದ್ಧಿ ಬಂದಿದೆ. ನಾವು ಅಮರನಾಥ ಯಾತ್ರೆಗೆ ಹೋಗುವಾಗ ಕೋಮುವಾದಿಗಳು, ಜಾತಿವಾದಿಗಳು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದರು. ಈಗ ಅವರೇ ಅಮರನಾಥ ಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.</p>.<p><strong>* ಇದನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/no-muslim-can-vote-bjp-zameer-569015.html">ಬಿಜೆಪಿಗೆ ಮತ ನೀಡುವವರು ಮುಸ್ಲಿಂ ಆಗಿರಲು ಸಾಧ್ಯವಿಲ್ಲ: ಜಮೀರ್ ಅಹ್ಮದ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>