ನೆರವಿನ ಭರವಸೆ: ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ‘ಸ್ವಾಮೀಜಿಗಳು ತಮ್ಮ ಸಮಸ್ಯೆಗಳನ್ನು ನಮ್ಮ ಮುಂದಿಟ್ಟಿದ್ದಾರೆ. ಅಗತ್ಯವಿರುವ ನೆರವನ್ನು ಒದಗಿಸುವ ಭರವಸೆ ನೀಡಿದ್ದೇವೆ. ಈ ಉದ್ದೇಶಕ್ಕಾಗಿ ಮಠಾಧೀಶರ ನಿಯೋಗವನ್ನು ಕರೆದೊಯ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುವ ಭರವಸೆಯನ್ನೂ ನೀಡಿದ್ದೇವೆ’ ಎಂದರು.