<p><strong>ಬೆಂಗಳೂರು: </strong>‘ಸದನದಲ್ಲಿ ಉತ್ತರ ನೀಡುವ ಮುನ್ನ ಸಚಿವರು ಸಾಕಷ್ಟು ಪೂರ್ವಸಿದ್ಧತೆ ಮಾಡಿಕೊಂಡು ಬರುತ್ತಿಲ್ಲ’ ಎಂದು ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ವಿಧಾನಪರಿಷತ್ತಿನಲ್ಲಿ ಆರೋಪ ಮಾಡಿದರು.</p>.<p>ಪ್ರಶ್ನೋತ್ತರ ವೇಳೆಯಲ್ಲಿ ಬುಧವಾರ ಕೆಲವು ಪ್ರಶ್ನೆಗಳ ಉತ್ತರಕ್ಕೆ ಸಂಬಂಧಿಸಿ ಅರ್ಧಗಂಟೆಗೂ ಹೆಚ್ಚು ಚರ್ಚೆ ನಡೆಯಿತು. ಈ ಬಗ್ಗೆ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ‘ಒಂದೊಂದು ಪ್ರಶ್ನೆಗೂ ಇಷ್ಟು ಹೊತ್ತು ಚರ್ಚೆ ನಡೆಸಿದರೆ ಸದನ ನಡೆಸುವುದು ಹೇಗೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸಚಿವರು ಸರಿಯಾಗಿ ಪೂರ್ವತಯಾರಿ ನಡೆಸಿ ಸದನಕ್ಕೆ ಬರುತ್ತಿಲ್ಲ. ಅಧಿಕಾರಿಗಳು ಚೀಟಿಯಲ್ಲಿ ಬರೆದು ಕೊಟ್ಟಿದ್ದನ್ನಷ್ಟೆ ಇಲ್ಲಿ ಓದುತ್ತಿದ್ದಾರೆ. ಪ್ರಶ್ನೆಗೆ ಸಮರ್ಪಕವಾದ ಉತ್ತರ ಸಿಗದ ಕಾರಣಕ್ಕೆ ಸಮಯ ವ್ಯರ್ಥವಾಗುತ್ತಿದೆ’ ಎಂದು ಆಯನೂರು ಮಂಜುನಾಥ್ ಆರೋಪಿಸಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ನ ಎಸ್.ಆರ್.ಪಾಟೀಲ, ‘ ಸಚಿವರು ಅಧಿಕಾರಿಗಳಿಂದ ವಿವರಣೆ ಪಡೆದಾದರೂ ಬರುತ್ತಾರೋ ಇಲ್ಲವೋ ಎಂದು ಸಂದೇಹ ಉಂಟಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸದನದಲ್ಲಿ ಉತ್ತರ ನೀಡುವ ಮುನ್ನ ಸಚಿವರು ಸಾಕಷ್ಟು ಪೂರ್ವಸಿದ್ಧತೆ ಮಾಡಿಕೊಂಡು ಬರುತ್ತಿಲ್ಲ’ ಎಂದು ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ವಿಧಾನಪರಿಷತ್ತಿನಲ್ಲಿ ಆರೋಪ ಮಾಡಿದರು.</p>.<p>ಪ್ರಶ್ನೋತ್ತರ ವೇಳೆಯಲ್ಲಿ ಬುಧವಾರ ಕೆಲವು ಪ್ರಶ್ನೆಗಳ ಉತ್ತರಕ್ಕೆ ಸಂಬಂಧಿಸಿ ಅರ್ಧಗಂಟೆಗೂ ಹೆಚ್ಚು ಚರ್ಚೆ ನಡೆಯಿತು. ಈ ಬಗ್ಗೆ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ‘ಒಂದೊಂದು ಪ್ರಶ್ನೆಗೂ ಇಷ್ಟು ಹೊತ್ತು ಚರ್ಚೆ ನಡೆಸಿದರೆ ಸದನ ನಡೆಸುವುದು ಹೇಗೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸಚಿವರು ಸರಿಯಾಗಿ ಪೂರ್ವತಯಾರಿ ನಡೆಸಿ ಸದನಕ್ಕೆ ಬರುತ್ತಿಲ್ಲ. ಅಧಿಕಾರಿಗಳು ಚೀಟಿಯಲ್ಲಿ ಬರೆದು ಕೊಟ್ಟಿದ್ದನ್ನಷ್ಟೆ ಇಲ್ಲಿ ಓದುತ್ತಿದ್ದಾರೆ. ಪ್ರಶ್ನೆಗೆ ಸಮರ್ಪಕವಾದ ಉತ್ತರ ಸಿಗದ ಕಾರಣಕ್ಕೆ ಸಮಯ ವ್ಯರ್ಥವಾಗುತ್ತಿದೆ’ ಎಂದು ಆಯನೂರು ಮಂಜುನಾಥ್ ಆರೋಪಿಸಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ನ ಎಸ್.ಆರ್.ಪಾಟೀಲ, ‘ ಸಚಿವರು ಅಧಿಕಾರಿಗಳಿಂದ ವಿವರಣೆ ಪಡೆದಾದರೂ ಬರುತ್ತಾರೋ ಇಲ್ಲವೋ ಎಂದು ಸಂದೇಹ ಉಂಟಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>