<p><strong>ಬೆಂಗಳೂರು:</strong> ‘ಬರ ಪರಿಸ್ಥಿತಿ ನಿಭಾಯಿಸಲು ಸಣ್ಣ ನೀರಾವರಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕೆ.ಸಿ. ವ್ಯಾಲಿ ಮತ್ತು ಎಚ್.ಎನ್. ವ್ಯಾಲಿಯಂಥ ಯೋಜನೆಗಳಿಂದ ಬಯಲು ಸೀಮೆಯ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ’ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.<br><br>ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ 2017-18ರಲ್ಲಿ ಆರನೇ ನೀರಾವರಿ ಗಣತಿಯ ಸಮೀಕ್ಷೆ ನಡೆಸಿದಾಗ ರಾಜ್ಯದಲ್ಲಿ ಬರ ಇತ್ತು. ನಂತರದ ವರ್ಷಗಳಲ್ಲಿ ಕೆರೆಗಳನ್ನು ತುಂಬುವ ಏತ ನೀರಾವರಿಯ ಯೋಜನೆಗಳಿಂದ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿದೆ’ ಎಂದರು.</p>.<p>‘2022 -23ನೇ ಸಾಲಿನ ಏಳನೇನೀರಾವರಿ ಗಣತಿ ಕಾರ್ಯವು ಸದ್ಯದಲ್ಲೇ ಆರಂಭವಾಗಲಿದೆ. ಅದರಲ್ಲಿ ಉತ್ತಮ ಸಾಧನೆ ವ್ಯಕ್ತವಾಗುವ ನಿರೀಕ್ಷೆಯಿದೆ’ ಎಂದರು.</p>.<p>‘ಇಲಾಖೆಯ ವ್ಯಾಪ್ತಿಯಲ್ಲಿ 3,673 ಕೆರೆಗಳಿವೆ. ಏತ ನೀರಾವರಿ ಯೋಜನೆಗಳ ಮೂಲಕ ಅವುಗಳನ್ನು ತುಂಬಿಸುವ ಕಾರ್ಯ ನಡೆಯುತ್ತದೆ. ಈ ಬಾರಿ ಕಡಿಮೆ ಮಳೆಯಾಗಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಕೆರೆಗಳಲ್ಲಿ ನೀರು ತುಂಬಿಲ್ಲ. 334 (ಶೇ9) ಕೆರೆಗಳಲ್ಲಿ ಶೇ 30ಕ್ಕೂ ಕಡಿಮೆ ನೀರು ಸಂಗ್ರಹವಿದೆ’ ಎಂದರು.</p>.<p>‘ಕೆರೆಗಳಲ್ಲಿ ನೀರು ಸಂಗ್ರಹಿಸಿ ಬರ ಪರಿಸ್ಥಿತಿ ನಿಭಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆ ವ್ಯಾಪ್ತಿಯ ಕೆರೆಗಳ ತೂಬುಗಳಿಂದ ಕೃಷಿ ಚಟುವಟಿಕೆಗೆ ನೀರು ಹರಿಸುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬರ ಪರಿಸ್ಥಿತಿ ನಿಭಾಯಿಸಲು ಸಣ್ಣ ನೀರಾವರಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕೆ.ಸಿ. ವ್ಯಾಲಿ ಮತ್ತು ಎಚ್.ಎನ್. ವ್ಯಾಲಿಯಂಥ ಯೋಜನೆಗಳಿಂದ ಬಯಲು ಸೀಮೆಯ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ’ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.<br><br>ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ 2017-18ರಲ್ಲಿ ಆರನೇ ನೀರಾವರಿ ಗಣತಿಯ ಸಮೀಕ್ಷೆ ನಡೆಸಿದಾಗ ರಾಜ್ಯದಲ್ಲಿ ಬರ ಇತ್ತು. ನಂತರದ ವರ್ಷಗಳಲ್ಲಿ ಕೆರೆಗಳನ್ನು ತುಂಬುವ ಏತ ನೀರಾವರಿಯ ಯೋಜನೆಗಳಿಂದ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿದೆ’ ಎಂದರು.</p>.<p>‘2022 -23ನೇ ಸಾಲಿನ ಏಳನೇನೀರಾವರಿ ಗಣತಿ ಕಾರ್ಯವು ಸದ್ಯದಲ್ಲೇ ಆರಂಭವಾಗಲಿದೆ. ಅದರಲ್ಲಿ ಉತ್ತಮ ಸಾಧನೆ ವ್ಯಕ್ತವಾಗುವ ನಿರೀಕ್ಷೆಯಿದೆ’ ಎಂದರು.</p>.<p>‘ಇಲಾಖೆಯ ವ್ಯಾಪ್ತಿಯಲ್ಲಿ 3,673 ಕೆರೆಗಳಿವೆ. ಏತ ನೀರಾವರಿ ಯೋಜನೆಗಳ ಮೂಲಕ ಅವುಗಳನ್ನು ತುಂಬಿಸುವ ಕಾರ್ಯ ನಡೆಯುತ್ತದೆ. ಈ ಬಾರಿ ಕಡಿಮೆ ಮಳೆಯಾಗಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಕೆರೆಗಳಲ್ಲಿ ನೀರು ತುಂಬಿಲ್ಲ. 334 (ಶೇ9) ಕೆರೆಗಳಲ್ಲಿ ಶೇ 30ಕ್ಕೂ ಕಡಿಮೆ ನೀರು ಸಂಗ್ರಹವಿದೆ’ ಎಂದರು.</p>.<p>‘ಕೆರೆಗಳಲ್ಲಿ ನೀರು ಸಂಗ್ರಹಿಸಿ ಬರ ಪರಿಸ್ಥಿತಿ ನಿಭಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆ ವ್ಯಾಪ್ತಿಯ ಕೆರೆಗಳ ತೂಬುಗಳಿಂದ ಕೃಷಿ ಚಟುವಟಿಕೆಗೆ ನೀರು ಹರಿಸುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>