<p><strong>ಬೆಂಗಳೂರು:</strong> ‘ಕಳೆದ ಮೂರು ವರ್ಷಗಳಲ್ಲಿ ಜೈನ, ಬೌದ್ಧ, ಸಿಖ್ ಸಮುದಾಯದ ಸಂಘ ಸಂಸ್ಥೆಗಳಿಗೂ ಸಮುದಾಯ ಭವನ ನಿರ್ಮಾಣಕ್ಕೆ ಇಲಾಖೆಯಿಂದ ಅನುದಾನ ನೀಡಲಾಗಿದೆ’ ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.</p>.<p>‘ಜೈನ ಸಮುದಾಯಕ್ಕೆ 148 ಭವನಗಳಿಗೆ ₹26 ಕೋಟಿ, ಬೌದ್ಧ ಸಮುದಾಯಕ್ಕೆ 11 ಭವನಗಳಿಗೆ ₹3 ಕೋಟಿ, ಸಿಖ್ ಸಮುದಾಯದ ಒಂದು ಭವನಕ್ಕೆ ₹50 ಲಕ್ಷ, ಕ್ರಿಶ್ಚಿಯನ್ ಸಮುದಾಯದ 188 ಭವನಗಳಿಗೆ ₹47 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ’ ಎಂದು ವಿವರಿಸಿದ್ದಾರೆ.</p>.<p>ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಹುಪಯೋಗಿ ಭವನ ನಿರ್ಮಾಣಕ್ಕೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮುಸ್ಲಿಂ ಸಮುದಾಯಕ್ಕೆ ಅನುದಾನ ನೀಡಿರುವುದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಕ್ಷೇಪ ವ್ಯಕ್ತಪಡಿಸಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ಜಮೀರ್, ‘ಅಶೋಕ ಅವರು ಮುಸ್ಲಿಂ ತುಷ್ಟೀಕರಣ ಎಂದು ಹೇಳಿರುವುದು ಸರಿಯಲ್ಲ. ಪ್ರತಿ ವಿಚಾರಕ್ಕೂ ಬೇರೆ ಬಣ್ಣ ನೀಡುವುದು ಅವರಿಗೆ ಶೋಭೆ ತರುವುದಿಲ್ಲ’ ಎಂದಿದ್ದಾರೆ.</p>.<p>‘ಮುಸ್ಲಿಂ ಸಮುದಾಯದ ಶಾದಿ ಮಹಲ್ ನಿರ್ಮಾಣಕ್ಕೆ ಎಲ್ಲ ಸರ್ಕಾರದ ಅವಧಿಯಲ್ಲೂ ಅನುದಾನ ಒದಗಿಸಲಾಗುತ್ತಿದೆ. ಅದೇ ರೀತಿ ಈಗಲೂ ನೀಡಲಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಳೆದ ಮೂರು ವರ್ಷಗಳಲ್ಲಿ ಜೈನ, ಬೌದ್ಧ, ಸಿಖ್ ಸಮುದಾಯದ ಸಂಘ ಸಂಸ್ಥೆಗಳಿಗೂ ಸಮುದಾಯ ಭವನ ನಿರ್ಮಾಣಕ್ಕೆ ಇಲಾಖೆಯಿಂದ ಅನುದಾನ ನೀಡಲಾಗಿದೆ’ ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.</p>.<p>‘ಜೈನ ಸಮುದಾಯಕ್ಕೆ 148 ಭವನಗಳಿಗೆ ₹26 ಕೋಟಿ, ಬೌದ್ಧ ಸಮುದಾಯಕ್ಕೆ 11 ಭವನಗಳಿಗೆ ₹3 ಕೋಟಿ, ಸಿಖ್ ಸಮುದಾಯದ ಒಂದು ಭವನಕ್ಕೆ ₹50 ಲಕ್ಷ, ಕ್ರಿಶ್ಚಿಯನ್ ಸಮುದಾಯದ 188 ಭವನಗಳಿಗೆ ₹47 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ’ ಎಂದು ವಿವರಿಸಿದ್ದಾರೆ.</p>.<p>ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಹುಪಯೋಗಿ ಭವನ ನಿರ್ಮಾಣಕ್ಕೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮುಸ್ಲಿಂ ಸಮುದಾಯಕ್ಕೆ ಅನುದಾನ ನೀಡಿರುವುದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಕ್ಷೇಪ ವ್ಯಕ್ತಪಡಿಸಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ಜಮೀರ್, ‘ಅಶೋಕ ಅವರು ಮುಸ್ಲಿಂ ತುಷ್ಟೀಕರಣ ಎಂದು ಹೇಳಿರುವುದು ಸರಿಯಲ್ಲ. ಪ್ರತಿ ವಿಚಾರಕ್ಕೂ ಬೇರೆ ಬಣ್ಣ ನೀಡುವುದು ಅವರಿಗೆ ಶೋಭೆ ತರುವುದಿಲ್ಲ’ ಎಂದಿದ್ದಾರೆ.</p>.<p>‘ಮುಸ್ಲಿಂ ಸಮುದಾಯದ ಶಾದಿ ಮಹಲ್ ನಿರ್ಮಾಣಕ್ಕೆ ಎಲ್ಲ ಸರ್ಕಾರದ ಅವಧಿಯಲ್ಲೂ ಅನುದಾನ ಒದಗಿಸಲಾಗುತ್ತಿದೆ. ಅದೇ ರೀತಿ ಈಗಲೂ ನೀಡಲಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>