<p><strong>ಬೆಂಗಳೂರು:</strong> ‘ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣಕ್ಕೆ ಇತಿಮಿತಿಯೇ ಇಲ್ಲ. ಈ ಸರ್ಕಾರವು ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ದೂರಿದ್ದಾರೆ.</p>.<p>ಅಲ್ಪಸಂಖ್ಯಾತ ಸಮುದಾಯದವರು ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆ ನಡೆಸಲು ಬಹುಪಯೋಗಿ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ₹67 ಕೋಟಿ ಮಂಜೂರು ಮಾಡಿದೆ ಎಂದು ‘ಪ್ರಜಾವಾಣಿ’ಯು ಶುಕ್ರವಾರದ ಸಂಚಿಕೆಯಲ್ಲಿ ವರದಿ ಪ್ರಕಟಿಸಿತ್ತು. ಈ ವರದಿಯನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಅಶೋಕ, ‘ಮುಸ್ಲಿಮರಿಗೆ ತುಷ್ಟೀಕರಣದ ಭಾಗ್ಯ, ಓಲೈಕೆ ಗ್ಯಾರಂಟಿ. ಹಿಂದೂಗಳಿಗೆ ತೆರಿಗೆ, ತೊಂದರೆ ಮತ್ತು ಚೊಂಬು ಗ್ಯಾರಂಟಿ’ ಎಂದಿದ್ದಾರೆ.</p>.<p>‘ರೈತರಿಗೆ ನೆರೆ ಮತ್ತು ಬರ ಪರಿಹಾರ ನೀಡಲು, ಸರ್ಕಾರಿ ನೌಕರರಿಗೆ ವೇತನ ನೀಡಲು, ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು, ರಸ್ತೆ ಗುಂಡಿ ಮುಚ್ಚಲು, ಮಕ್ಕಳ ಬಿಸಿಯೂಟಕ್ಕೆ ಸರ್ಕಾರದ ಬಳಿ ಹಣವಿಲ್ಲ. ಆದರೆ ಮುಸ್ಲಿಂ ಭವನಗಳ ನಿರ್ಮಾಣಕ್ಕೆ ₹67 ಕೋಟಿ ನೀಡಿದೆ. ಮುಸ್ಲಿಮರು ಮಾತ್ರವೇ ಇವರಿಗೆ ಮತ ಹಾಕಿದ್ದಾರಾ? ಹಿಂದೂಗಳು ಮತ ಹಾಕಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<p>ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ವರದಿಯನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಜನಕಲ್ಯಾಣ ಮತ್ತು ಬಿಸಿಯೂಟ ಕಾರ್ಯಕ್ರಮಗಳಿಗೆ ಹಣವಿಲ್ಲ ಎನ್ನುವ ಸಿದ್ದರಾಮಯ್ಯ ಅವರು, ಮತಬ್ಯಾಂಕ್ ಗುರಿಯಾಗಿಸಿಕೊಂಡು ಒಂದು ಸಮುದಾಯಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿರುವುದು ಸಂವಿಧಾನಬಾಹಿರ’ ಎಂದಿದ್ದಾರೆ.</p>.<p>‘ರಾಜ್ಯದ ಸಮಗ್ರ ಅಭಿವೃದ್ಧಿಗೆ ಮೀಸಲಾಗಿರಬೇಕಾದ ಜನರ ಹಣವನ್ನು, ಒಂದು ಸಮುದಾಯದ ಸಂತೃಪ್ತಿಗೆ ಬಳಸುವುದು ಆಡಳಿತದ ಮೂಲ ತತ್ವಕ್ಕೆ ವಿರುದ್ಧವಾದುದು. ಎಲ್ಲರಿಗೂ ಸಮಾನ ಅವಕಾಶ ಒದಗಿಸುವ ಸಂವಿಧಾನಬದ್ಧ ಹೊಣೆಗಾರಿಕೆಗೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣಕ್ಕೆ ಇತಿಮಿತಿಯೇ ಇಲ್ಲ. ಈ ಸರ್ಕಾರವು ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ದೂರಿದ್ದಾರೆ.</p>.<p>ಅಲ್ಪಸಂಖ್ಯಾತ ಸಮುದಾಯದವರು ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆ ನಡೆಸಲು ಬಹುಪಯೋಗಿ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ₹67 ಕೋಟಿ ಮಂಜೂರು ಮಾಡಿದೆ ಎಂದು ‘ಪ್ರಜಾವಾಣಿ’ಯು ಶುಕ್ರವಾರದ ಸಂಚಿಕೆಯಲ್ಲಿ ವರದಿ ಪ್ರಕಟಿಸಿತ್ತು. ಈ ವರದಿಯನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಅಶೋಕ, ‘ಮುಸ್ಲಿಮರಿಗೆ ತುಷ್ಟೀಕರಣದ ಭಾಗ್ಯ, ಓಲೈಕೆ ಗ್ಯಾರಂಟಿ. ಹಿಂದೂಗಳಿಗೆ ತೆರಿಗೆ, ತೊಂದರೆ ಮತ್ತು ಚೊಂಬು ಗ್ಯಾರಂಟಿ’ ಎಂದಿದ್ದಾರೆ.</p>.<p>‘ರೈತರಿಗೆ ನೆರೆ ಮತ್ತು ಬರ ಪರಿಹಾರ ನೀಡಲು, ಸರ್ಕಾರಿ ನೌಕರರಿಗೆ ವೇತನ ನೀಡಲು, ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು, ರಸ್ತೆ ಗುಂಡಿ ಮುಚ್ಚಲು, ಮಕ್ಕಳ ಬಿಸಿಯೂಟಕ್ಕೆ ಸರ್ಕಾರದ ಬಳಿ ಹಣವಿಲ್ಲ. ಆದರೆ ಮುಸ್ಲಿಂ ಭವನಗಳ ನಿರ್ಮಾಣಕ್ಕೆ ₹67 ಕೋಟಿ ನೀಡಿದೆ. ಮುಸ್ಲಿಮರು ಮಾತ್ರವೇ ಇವರಿಗೆ ಮತ ಹಾಕಿದ್ದಾರಾ? ಹಿಂದೂಗಳು ಮತ ಹಾಕಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<p>ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ವರದಿಯನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಜನಕಲ್ಯಾಣ ಮತ್ತು ಬಿಸಿಯೂಟ ಕಾರ್ಯಕ್ರಮಗಳಿಗೆ ಹಣವಿಲ್ಲ ಎನ್ನುವ ಸಿದ್ದರಾಮಯ್ಯ ಅವರು, ಮತಬ್ಯಾಂಕ್ ಗುರಿಯಾಗಿಸಿಕೊಂಡು ಒಂದು ಸಮುದಾಯಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿರುವುದು ಸಂವಿಧಾನಬಾಹಿರ’ ಎಂದಿದ್ದಾರೆ.</p>.<p>‘ರಾಜ್ಯದ ಸಮಗ್ರ ಅಭಿವೃದ್ಧಿಗೆ ಮೀಸಲಾಗಿರಬೇಕಾದ ಜನರ ಹಣವನ್ನು, ಒಂದು ಸಮುದಾಯದ ಸಂತೃಪ್ತಿಗೆ ಬಳಸುವುದು ಆಡಳಿತದ ಮೂಲ ತತ್ವಕ್ಕೆ ವಿರುದ್ಧವಾದುದು. ಎಲ್ಲರಿಗೂ ಸಮಾನ ಅವಕಾಶ ಒದಗಿಸುವ ಸಂವಿಧಾನಬದ್ಧ ಹೊಣೆಗಾರಿಕೆಗೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>