<p><strong>ಬೆಂಗಳೂರು</strong>: ‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವುದಕ್ಕೆ ರೂಪಿಸಲಾಗಿರುವ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 498ಎ ಅನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ’ ಎಂದು ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.</p>.<p>ಕೌಟುಂಬಿಕ ಪ್ರಕರಣವೊಂದರಲ್ಲಿ ಪತಿಯ ವಿರುದ್ಧದ ಪ್ರಕರಣದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪತಿಯ ಕುಟುಂಬದವರನ್ನು ಅನಗತ್ಯವಾಗಿ ಅಪರಾಧ ಕೃತ್ಯದ ಜಾಲದಲ್ಲಿ ಸಿಲುಕಿಸುವಂತಹ ಪ್ರಕರಣಗಳನ್ನು ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗುತ್ತದೆ’ ಎಂದು ಹೇಳಿದೆ.</p>.<p>‘ದುರ್ಬಳಕೆ ಪ್ರಕರಣಗಳ ಬಗ್ಗೆ ಹೈಕೋರ್ಟ್ ಈ ಹಿಂದೆಯೇ ಹಲವು ಬಾರಿ ಎಚ್ಚರಿಸಿದ್ದರೂ ಇಂತಹ ಪ್ರಕರಣ ಮರುಕಳಿಸುತ್ತಲೇ ಇವೆ. ಈ ಪ್ರಕರಣಗಳಲ್ಲಿ ಪತಿಯ ವಿರುದ್ಧ ಮಾತ್ರವಲ್ಲದೆ, ಅವರ ಕುಟುಂಬದವರನ್ನೂ ಅನಗತ್ಯವಾಗಿ ಎಳೆಯಲಾಗುತ್ತಿದೆ. ಇವುಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳದೇ ಹೊದರೆ ಈ ದಿಸೆಯಲ್ಲಿ ರೂಪಿಸಲಾಗಿರುವ ಕಾನೂನಿನ ದುರುಪಯೋಗ ಹೆಚ್ಚುತ್ತದೆ. ಆದ್ದರಿಂದ, ವಿಚಾರಣಾ ನ್ಯಾಯಾಲಯಗಳು ಪತಿಯ ಕುಟುಂಬದವರ ವಿರುದ್ಧದ ಪ್ರಕರಣಗಳನ್ನು ಮುಂದುವರಿಸುವಾಗ ತುಂಬಾ ಜಾಗ್ರತೆ ವಹಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವುದಕ್ಕೆ ರೂಪಿಸಲಾಗಿರುವ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 498ಎ ಅನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ’ ಎಂದು ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.</p>.<p>ಕೌಟುಂಬಿಕ ಪ್ರಕರಣವೊಂದರಲ್ಲಿ ಪತಿಯ ವಿರುದ್ಧದ ಪ್ರಕರಣದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪತಿಯ ಕುಟುಂಬದವರನ್ನು ಅನಗತ್ಯವಾಗಿ ಅಪರಾಧ ಕೃತ್ಯದ ಜಾಲದಲ್ಲಿ ಸಿಲುಕಿಸುವಂತಹ ಪ್ರಕರಣಗಳನ್ನು ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗುತ್ತದೆ’ ಎಂದು ಹೇಳಿದೆ.</p>.<p>‘ದುರ್ಬಳಕೆ ಪ್ರಕರಣಗಳ ಬಗ್ಗೆ ಹೈಕೋರ್ಟ್ ಈ ಹಿಂದೆಯೇ ಹಲವು ಬಾರಿ ಎಚ್ಚರಿಸಿದ್ದರೂ ಇಂತಹ ಪ್ರಕರಣ ಮರುಕಳಿಸುತ್ತಲೇ ಇವೆ. ಈ ಪ್ರಕರಣಗಳಲ್ಲಿ ಪತಿಯ ವಿರುದ್ಧ ಮಾತ್ರವಲ್ಲದೆ, ಅವರ ಕುಟುಂಬದವರನ್ನೂ ಅನಗತ್ಯವಾಗಿ ಎಳೆಯಲಾಗುತ್ತಿದೆ. ಇವುಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳದೇ ಹೊದರೆ ಈ ದಿಸೆಯಲ್ಲಿ ರೂಪಿಸಲಾಗಿರುವ ಕಾನೂನಿನ ದುರುಪಯೋಗ ಹೆಚ್ಚುತ್ತದೆ. ಆದ್ದರಿಂದ, ವಿಚಾರಣಾ ನ್ಯಾಯಾಲಯಗಳು ಪತಿಯ ಕುಟುಂಬದವರ ವಿರುದ್ಧದ ಪ್ರಕರಣಗಳನ್ನು ಮುಂದುವರಿಸುವಾಗ ತುಂಬಾ ಜಾಗ್ರತೆ ವಹಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>