<p><strong>ಬೆಂಗಳೂರು:</strong> ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೆಂಬಲದಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ನಾಮ ಪತ್ರ ಸಲ್ಲಿಸಿದರು.. ಆ ಮೂಲಕ, ಬಿಜೆಪಿ– ಜೆಡಿಎಸ್ ನಡುವೆ ಮತ್ತೊಂದು ಸುತ್ತಿನ ‘ಮೈತ್ರಿ’ ಆರಂಭಗೊಂಡಿದೆ.</p>.<p>ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ನ ಬಸವರಾಜ ಹೊರಟ್ಟಿ, ಕೋನರೆಡ್ಡಿ ಉಪಸ್ಥಿತತರಿದ್ದರು.</p>.<p>ಉಪಸಭಾಪತಿ ಚುನಾವಣೆಗೆಕಾಂಗ್ರೆಸ್ ಅಭ್ಯರ್ಥಿಯಾಗಿಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ , ಮುಖ್ಯ ಸಚೇತಕ ನಾರಾಯಣ್ ಸ್ವಾಮಿ, ಬಿಕೆ ಹರೀಪ್ರಸಾದ್ ಉಪಸ್ಥಿತರಿದ್ದರು.</p>.<p>ಜೆಡಿಎಸ್ ಮುಖಂಡ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಉಪ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಸ್ಥಾನ ಜೆಡಿಎಸ್ನ ಬಸವರಾಜ ಹೊರಟ್ಟಿ ಪಾಲಾಗಲಿದೆ.</p>.<p>ವಿಧಾನ ಪರಿಷತ್ನಲ್ಲಿ ಆಡಳಿತಾರೂಢ ಬಿಜೆಪಿ ಪ್ರಾಬಲ್ಯ ಹೊಂದಿಲ್ಲದಿರುವುದರಿಂದ ಮಸೂದೆಗಳು ಅಂಗೀಕಾರವಾಗುವಲ್ಲಿ ಜೆಡಿಎಸ್ ಜೊತೆಗಿನ ಈ ಮೈತ್ರಿ ನೆರವಿಗೆ ಬರಲಿದೆ.</p>.<p>ಪರಿಷತ್ ನಲ್ಲಿ 31 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ 75 ಸದಸ್ಯ ಬಲದ ಸದನದಲ್ಲಿ ಜೆಡಿಎಸ್ ನ 13 ಸದಸ್ಯರ ಬೆಂಬಲ ಈಗಲೂ ಅಗತ್ಯವಾಗಿದೆ.ಕಾಂಗ್ರೆಸ್ನ 28, ಪಕ್ಷೇತರ ಒಬ್ಬರು ಇದ್ದಾರೆ. ಒಂದು ಸ್ಥಾನ ಈ ಖಾಲಿ ಇದೆ. ಸಭಾಪತಿ ಸ್ಥಾನವನ್ನು ಬಯಸಿರುವ ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೆಂಬಲದಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ನಾಮ ಪತ್ರ ಸಲ್ಲಿಸಿದರು.. ಆ ಮೂಲಕ, ಬಿಜೆಪಿ– ಜೆಡಿಎಸ್ ನಡುವೆ ಮತ್ತೊಂದು ಸುತ್ತಿನ ‘ಮೈತ್ರಿ’ ಆರಂಭಗೊಂಡಿದೆ.</p>.<p>ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ನ ಬಸವರಾಜ ಹೊರಟ್ಟಿ, ಕೋನರೆಡ್ಡಿ ಉಪಸ್ಥಿತತರಿದ್ದರು.</p>.<p>ಉಪಸಭಾಪತಿ ಚುನಾವಣೆಗೆಕಾಂಗ್ರೆಸ್ ಅಭ್ಯರ್ಥಿಯಾಗಿಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ , ಮುಖ್ಯ ಸಚೇತಕ ನಾರಾಯಣ್ ಸ್ವಾಮಿ, ಬಿಕೆ ಹರೀಪ್ರಸಾದ್ ಉಪಸ್ಥಿತರಿದ್ದರು.</p>.<p>ಜೆಡಿಎಸ್ ಮುಖಂಡ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಉಪ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಸ್ಥಾನ ಜೆಡಿಎಸ್ನ ಬಸವರಾಜ ಹೊರಟ್ಟಿ ಪಾಲಾಗಲಿದೆ.</p>.<p>ವಿಧಾನ ಪರಿಷತ್ನಲ್ಲಿ ಆಡಳಿತಾರೂಢ ಬಿಜೆಪಿ ಪ್ರಾಬಲ್ಯ ಹೊಂದಿಲ್ಲದಿರುವುದರಿಂದ ಮಸೂದೆಗಳು ಅಂಗೀಕಾರವಾಗುವಲ್ಲಿ ಜೆಡಿಎಸ್ ಜೊತೆಗಿನ ಈ ಮೈತ್ರಿ ನೆರವಿಗೆ ಬರಲಿದೆ.</p>.<p>ಪರಿಷತ್ ನಲ್ಲಿ 31 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ 75 ಸದಸ್ಯ ಬಲದ ಸದನದಲ್ಲಿ ಜೆಡಿಎಸ್ ನ 13 ಸದಸ್ಯರ ಬೆಂಬಲ ಈಗಲೂ ಅಗತ್ಯವಾಗಿದೆ.ಕಾಂಗ್ರೆಸ್ನ 28, ಪಕ್ಷೇತರ ಒಬ್ಬರು ಇದ್ದಾರೆ. ಒಂದು ಸ್ಥಾನ ಈ ಖಾಲಿ ಇದೆ. ಸಭಾಪತಿ ಸ್ಥಾನವನ್ನು ಬಯಸಿರುವ ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>