ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸೇರಿದ ಕಲ್ಲೇಶ್ವರ ಮಿಲ್ ಹಿಂಭಾಗದ ಫಾರ್ಮ್ ಹೌಸ್ನಲ್ಲಿ 2023ರಲ್ಲಿ ಕೃಷ್ಣಮೃಗ, ಜಿಂಕೆ ಸೇರಿದಂತೆ ಒಟ್ಟು 30 ವನ್ಯಜೀವಿಗಳು ಪತ್ತೆ ಆಗಿದ್ದವು. ಆದರೆ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮದೇ ಸರ್ಕಾರ ಇದ್ದರೂ ಅವರನ್ನು ಬಂಧಿಸಲಿಲ್ಲ. ಈ ಪ್ರಕರಣದಲ್ಲಿ ಶಾಮನೂರು ಅವರ ಕುಟುಂಬಕ್ಕೆ ಯಡಿಯೂರಪ್ಪ ಅವರು ಸಹಾಯ ಮಾಡಿದ್ದರು’ ಎಂದು ದೂರಿದರು.