<figcaption>""</figcaption>.<p><strong>ಬೆಂಗಳೂರು</strong>: ಆರ್ಥಿಕ ವರ್ಷದ ಕೊನೆ ಹಂತಕ್ಕೆ ಕಾಲಿಟ್ಟಿದ್ದರೂ ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ’ಗೆ ವಾರ್ಷಿಕ ನೀಡಬೇಕಾದ ₹2 ಕೋಟಿ ಬಿಡುಗಡೆ ಮಾಡದೇ ಇರುವ ಸರ್ಕಾರದ ಕ್ರಮ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ಶಾಸಕರನ್ನು ಭೇಟಿ ಮಾಡುವ ಕ್ಷೇತ್ರದ ಜನರು ರಸ್ತೆ, ಕುಡಿಯುವ ನೀರು ಸೇರಿದಂತೆ ತಮ್ಮ ಭಾಗದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸುವುದು ರೂಢಿ. ಈ ವರ್ಷ ಹಣ ಕೊಡದೇ ಇರುವುದರಿಂದ ತಮಗೆ ವೋಟು ಕೊಟ್ಟ ಮತದಾರರ ಸಣ್ಣ ಪುಟ್ಟ ಕೆಲಸಗಳನ್ನು ಮಾಡಿಕೊಡಲಾಗುತ್ತಿಲ್ಲ. ಜನರಿಗೆ ಏನು ಉತ್ತರ ಹೇಳುವುದು ಎಂಬುದು ಶಾಸಕರು ಪಕ್ಷಾತೀತವಾಗಿ ಕೇಳುತ್ತಿರುವ ಪ್ರಶ್ನೆ.</p>.<p>ಕಳೆದ ಹತ್ತು ತಿಂಗಳಲ್ಲಿ ಮೊದಲ ಕಂತಾಗಿ ಪ್ರತಿ ಶಾಸಕರಿಗೆ ಸುಮಾರು ₹50 ಲಕ್ಷ ಬಿಡುಗಡೆಯಾಗಿದ್ದು, ಇನ್ನೂ ₹1.50 ಕೋಟಿ ನೀಡಬೇಕಿದೆ. ಈಗ ಬಾಕಿ ಹಣ ಬಿಡುಗಡೆಯಾದರೂ ಉಳಿದಿರುವ ಅತ್ಯಲ್ಪ ಸಮಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಖರ್ಚು ಮಾಡಲು ಆಗುವುದಿಲ್ಲ ಎಂಬುದು ಜನಪ್ರತಿನಿಧಿಗಳ ಅಳಲು.</p>.<p>ಆರ್ಥಿಕ ಹಿಂಜರಿತ ಸೇರಿದಂತೆ ವಿವಿಧ ಕಾರಣಗಳಿಂದಾಗಿ ತೆರಿಗೆ ಸಂಗ್ರಹದಲ್ಲಿ ಹಿನ್ನಡೆಯಾಗಿದ್ದು, ಸಂಪನ್ಮೂಲ ಕೊರತೆಯಿಂದ ಶಾಸಕರ ನಿಧಿಗೂ ಹಣ ಕೊಡಲು ತತ್ವಾರ ಎದುರಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಟೀಕಿಸಿದ್ದಾರೆ.</p>.<p><strong>ಹೆಚ್ಚಿದ ಬೇಡಿಕೆ:</strong> ವರ್ಷಕ್ಕೆ ₹1 ಕೋಟಿ ನೀಡುತ್ತಿದ್ದ ಅನುದಾನವನ್ನು ₹2 ಕೋಟಿಗೆ ಹೆಚ್ಚಿಸಲಾಯಿತು. ಈ ಮೊತ್ತವೂ ಸಾಲದಾಗಿದ್ದು, ಮತ್ತಷ್ಟು ಹೆಚ್ಚಳ ಮಾಡಬೇಕು ಎಂದು ಶಾಸಕರು ಸದಾ ಒತ್ತಡ ಹಾಕುತ್ತಲೇ ಇದ್ದಾರೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸಿ.ಎಂ ಆಗಿದ್ದಾಗಲೂ ಈ ಮೊತ್ತವನ್ನು ₹5 ಕೋಟಿಗೆ ಏರಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಸದನದ ಒಳಗೆ ಹಾಗೂ ಹೊರಗೆ ಸಾಕಷ್ಟು ಚರ್ಚೆಗಳು ನಡೆದಿದ್ದು, ಅನುದಾನ ಹೆಚ್ಚಳದ ಭರವಸೆ ಸಿಕ್ಕರೂ, ಅದು ಕಾರ್ಯರೂಪಕ್ಕೆ ಬಂದಿಲ್ಲ.</p>.<p>‘ಕ್ಷೇತ್ರದ ಜನರು ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡಿಸುವಂತೆ ಕೇಳುತ್ತಿದ್ದು, ಉತ್ತರ ಕೊಡುವುದು ಕಷ್ಟಕರವಾಗಿದೆ’ ಎಂದು ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.</p>.<p><strong>ಹಣ ಇದೆ</strong>: ‘ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿ (ಪಿ.ಡಿ. ಖಾತೆ) ₹731 ಕೋಟಿ ಹಣ ಬಾಕಿ ಉಳಿದಿದೆ. ಈ ಹಣ ಖರ್ಚು ಮಾಡಬೇಕಿದ್ದು, ಹಂತಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ಹೆಸರು ಹೇಳಲು ಬಯಸದಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಹಿರಿಯ ಅಧಿಕಾರಿಯೊಬ್ಬರುತಿಳಿಸಿದರು.</p>.<p><strong>ನಿಧಿ ಬಳಕೆ ಯಾವುದಕ್ಕೆ</strong></p>.<p>* ರಸ್ತೆ ಕಾಮಗಾರಿ, ಕುಡಿಯುವ ನೀರು</p>.<p>* ಶಾಲೆ, ಅಂಗನವಾಡಿ, ಕಾಲೇಜು ಕಟ್ಟಡಗಳ ನಿರ್ಮಾಣ, ದುರಸ್ತಿ</p>.<p>* ಹಾಲಿನ ಡೇರಿ, ಸರ್ಕಾರಿ ಕಟ್ಟಡಗಳ ನಿರ್ಮಾಣ</p>.<p>* ದೇವಸ್ಥಾನಗಳಲ್ಲಿ ಸಭಾಂಗಣ, ಸಮುದಾಯ ಭವನಗಳ ನಿರ್ಮಾಣ (₹10 ಲಕ್ಷ ಮಿತಿ)</p>.<p>* ಸರ್ಕಾರಿ ಜಾಗದಲ್ಲಿ ಸಾರ್ವಜನಿಕ ಬಳಕೆಗೆ ಸಮುದಾಯ ಭವನಗಳ ನಿರ್ಮಾಣ</p>.<p>* ಸರ್ಕಾರದ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ</p>.<p>**<br />ಶಾಸಕರ ಪ್ರದೇಶಾಭಿವೃದ್ಧಿ ನಿಧಿಗೆ ಸಮರ್ಪಕವಾಗಿ ಹಣ ಬಿಡುಗಡೆ ಮಾಡಿಲ್ಲ. ಸರ್ಕಾರ ದಿವಾಳಿಯಾಗಿರುವುದನ್ನು ತೋರಿಸುತ್ತದೆ<br /><em><strong>–ಎಸ್.ಆರ್.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ</strong></em></p>.<p>*<br />ಹಂತಹಂತವಾಗಿ ಹಣ ಬಿಡುಗಡೆಯಾಗುತ್ತಿದೆ. ಕ್ರಿಯಾಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಿ, ಕೆಲಸ ಆರಂಭಿಸಲು ಯಾವುದೇ ತೊಡಕುಗಳಿಲ್ಲ<br /><em><strong>–ಎಸ್.ಆರ್.ವಿಶ್ವನಾಥ್, ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು</strong>: ಆರ್ಥಿಕ ವರ್ಷದ ಕೊನೆ ಹಂತಕ್ಕೆ ಕಾಲಿಟ್ಟಿದ್ದರೂ ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ’ಗೆ ವಾರ್ಷಿಕ ನೀಡಬೇಕಾದ ₹2 ಕೋಟಿ ಬಿಡುಗಡೆ ಮಾಡದೇ ಇರುವ ಸರ್ಕಾರದ ಕ್ರಮ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ಶಾಸಕರನ್ನು ಭೇಟಿ ಮಾಡುವ ಕ್ಷೇತ್ರದ ಜನರು ರಸ್ತೆ, ಕುಡಿಯುವ ನೀರು ಸೇರಿದಂತೆ ತಮ್ಮ ಭಾಗದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸುವುದು ರೂಢಿ. ಈ ವರ್ಷ ಹಣ ಕೊಡದೇ ಇರುವುದರಿಂದ ತಮಗೆ ವೋಟು ಕೊಟ್ಟ ಮತದಾರರ ಸಣ್ಣ ಪುಟ್ಟ ಕೆಲಸಗಳನ್ನು ಮಾಡಿಕೊಡಲಾಗುತ್ತಿಲ್ಲ. ಜನರಿಗೆ ಏನು ಉತ್ತರ ಹೇಳುವುದು ಎಂಬುದು ಶಾಸಕರು ಪಕ್ಷಾತೀತವಾಗಿ ಕೇಳುತ್ತಿರುವ ಪ್ರಶ್ನೆ.</p>.<p>ಕಳೆದ ಹತ್ತು ತಿಂಗಳಲ್ಲಿ ಮೊದಲ ಕಂತಾಗಿ ಪ್ರತಿ ಶಾಸಕರಿಗೆ ಸುಮಾರು ₹50 ಲಕ್ಷ ಬಿಡುಗಡೆಯಾಗಿದ್ದು, ಇನ್ನೂ ₹1.50 ಕೋಟಿ ನೀಡಬೇಕಿದೆ. ಈಗ ಬಾಕಿ ಹಣ ಬಿಡುಗಡೆಯಾದರೂ ಉಳಿದಿರುವ ಅತ್ಯಲ್ಪ ಸಮಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಖರ್ಚು ಮಾಡಲು ಆಗುವುದಿಲ್ಲ ಎಂಬುದು ಜನಪ್ರತಿನಿಧಿಗಳ ಅಳಲು.</p>.<p>ಆರ್ಥಿಕ ಹಿಂಜರಿತ ಸೇರಿದಂತೆ ವಿವಿಧ ಕಾರಣಗಳಿಂದಾಗಿ ತೆರಿಗೆ ಸಂಗ್ರಹದಲ್ಲಿ ಹಿನ್ನಡೆಯಾಗಿದ್ದು, ಸಂಪನ್ಮೂಲ ಕೊರತೆಯಿಂದ ಶಾಸಕರ ನಿಧಿಗೂ ಹಣ ಕೊಡಲು ತತ್ವಾರ ಎದುರಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಟೀಕಿಸಿದ್ದಾರೆ.</p>.<p><strong>ಹೆಚ್ಚಿದ ಬೇಡಿಕೆ:</strong> ವರ್ಷಕ್ಕೆ ₹1 ಕೋಟಿ ನೀಡುತ್ತಿದ್ದ ಅನುದಾನವನ್ನು ₹2 ಕೋಟಿಗೆ ಹೆಚ್ಚಿಸಲಾಯಿತು. ಈ ಮೊತ್ತವೂ ಸಾಲದಾಗಿದ್ದು, ಮತ್ತಷ್ಟು ಹೆಚ್ಚಳ ಮಾಡಬೇಕು ಎಂದು ಶಾಸಕರು ಸದಾ ಒತ್ತಡ ಹಾಕುತ್ತಲೇ ಇದ್ದಾರೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸಿ.ಎಂ ಆಗಿದ್ದಾಗಲೂ ಈ ಮೊತ್ತವನ್ನು ₹5 ಕೋಟಿಗೆ ಏರಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಸದನದ ಒಳಗೆ ಹಾಗೂ ಹೊರಗೆ ಸಾಕಷ್ಟು ಚರ್ಚೆಗಳು ನಡೆದಿದ್ದು, ಅನುದಾನ ಹೆಚ್ಚಳದ ಭರವಸೆ ಸಿಕ್ಕರೂ, ಅದು ಕಾರ್ಯರೂಪಕ್ಕೆ ಬಂದಿಲ್ಲ.</p>.<p>‘ಕ್ಷೇತ್ರದ ಜನರು ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡಿಸುವಂತೆ ಕೇಳುತ್ತಿದ್ದು, ಉತ್ತರ ಕೊಡುವುದು ಕಷ್ಟಕರವಾಗಿದೆ’ ಎಂದು ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.</p>.<p><strong>ಹಣ ಇದೆ</strong>: ‘ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿ (ಪಿ.ಡಿ. ಖಾತೆ) ₹731 ಕೋಟಿ ಹಣ ಬಾಕಿ ಉಳಿದಿದೆ. ಈ ಹಣ ಖರ್ಚು ಮಾಡಬೇಕಿದ್ದು, ಹಂತಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ಹೆಸರು ಹೇಳಲು ಬಯಸದಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಹಿರಿಯ ಅಧಿಕಾರಿಯೊಬ್ಬರುತಿಳಿಸಿದರು.</p>.<p><strong>ನಿಧಿ ಬಳಕೆ ಯಾವುದಕ್ಕೆ</strong></p>.<p>* ರಸ್ತೆ ಕಾಮಗಾರಿ, ಕುಡಿಯುವ ನೀರು</p>.<p>* ಶಾಲೆ, ಅಂಗನವಾಡಿ, ಕಾಲೇಜು ಕಟ್ಟಡಗಳ ನಿರ್ಮಾಣ, ದುರಸ್ತಿ</p>.<p>* ಹಾಲಿನ ಡೇರಿ, ಸರ್ಕಾರಿ ಕಟ್ಟಡಗಳ ನಿರ್ಮಾಣ</p>.<p>* ದೇವಸ್ಥಾನಗಳಲ್ಲಿ ಸಭಾಂಗಣ, ಸಮುದಾಯ ಭವನಗಳ ನಿರ್ಮಾಣ (₹10 ಲಕ್ಷ ಮಿತಿ)</p>.<p>* ಸರ್ಕಾರಿ ಜಾಗದಲ್ಲಿ ಸಾರ್ವಜನಿಕ ಬಳಕೆಗೆ ಸಮುದಾಯ ಭವನಗಳ ನಿರ್ಮಾಣ</p>.<p>* ಸರ್ಕಾರದ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ</p>.<p>**<br />ಶಾಸಕರ ಪ್ರದೇಶಾಭಿವೃದ್ಧಿ ನಿಧಿಗೆ ಸಮರ್ಪಕವಾಗಿ ಹಣ ಬಿಡುಗಡೆ ಮಾಡಿಲ್ಲ. ಸರ್ಕಾರ ದಿವಾಳಿಯಾಗಿರುವುದನ್ನು ತೋರಿಸುತ್ತದೆ<br /><em><strong>–ಎಸ್.ಆರ್.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ</strong></em></p>.<p>*<br />ಹಂತಹಂತವಾಗಿ ಹಣ ಬಿಡುಗಡೆಯಾಗುತ್ತಿದೆ. ಕ್ರಿಯಾಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಿ, ಕೆಲಸ ಆರಂಭಿಸಲು ಯಾವುದೇ ತೊಡಕುಗಳಿಲ್ಲ<br /><em><strong>–ಎಸ್.ಆರ್.ವಿಶ್ವನಾಥ್, ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>