ಹೈಕೋರ್ಟ್ನ ತೀರ್ಪು ಹೊರಬೀಳುತ್ತಲೇ, ಗೌರಿಶಂಕರ್ ಪರ ವಕೀಲರು, ‘ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವುದರಿಂದ ತೀರ್ಪಿಗೆ ತಡೆ ನೀಡಬೇಕು’ ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿದ್ದ ನ್ಯಾಯಪೀಠ, 30 ದಿನಗಳ ಕಾಲ ತನ್ನ ಆದೇಶವನ್ನು ಅಮಾನತಿನಲ್ಲಿ ಇರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಗೌರಿಶಂಕರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು, ‘ಸೂಕ್ತ ಸಮಯದಲ್ಲಿ ಈ ನ್ಯಾಯಾಲಯ ನೀಡುವ ನಿರ್ದೇಶನಗಳಿಗೆ ಒಳಪಟ್ಟು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮೇಲ್ಮನವಿದಾರರು ಅರ್ಹರು’ ಎಂದು ಹೇಳಿತು.