<p><strong>ಬೆಂಗಳೂರು</strong>: ಕೋಮು ದ್ವೇಷ ಹರಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>‘ನನ್ನ ವಿರುದ್ಧದ ಎಫ್ಐಆರ್ ಮತ್ತು ಈ ಸಂಬಂಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಹರೀಶ್ ಪೂಂಜ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ಪ್ರಕರಣದ ಪ್ರತಿವಾದಿಯೂ ಆದ ದೂರುದಾರ ಎಸ್.ಬಿ. ಇಬ್ರಾಹಿಂ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿತು.</p>.<p><strong>ಪ್ರಕರಣವೇನು?:</strong> ‘ಹರೀಶ್ ಪೂಂಜ ಅವರು ಮೇ 3ರಂದು ತೆಕ್ಕಾರು ಭಟ್ರಬೈಲಿನಲ್ಲಿ, ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡು, ತುಳು ಭಾಷೆಯಲ್ಲಿ ಮಾತನಾಡುತ್ತಾ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ. ಈ ಸಂಬಂಧದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲೂ ವೀಕ್ಷಿಸಲಾಗಿದೆ’ ಎಂದು ಆರೋಪಿಸಿ ತೆಕ್ಕಾರಿನ ಎಸ್.ಬಿ. ಇಬ್ರಾಹಿಂ ಅವರು ಉಪ್ಪಿನಂಗಡಿ ಠಾಣೆಯಲ್ಲಿ ಮೇ 4ರಂದು ದೂರು ನೀಡಿದ್ದರು.</p>.<p>ದೂರನ್ನು ಆಧರಿಸಿ ಹರೀಶ್ ಪೂಂಜ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 196 (ಧರ್ಮದ ಆಧಾರದಲ್ಲಿ ದ್ವೇಷ ಹರಡುವುದು), 353(2) (ದ್ವೇಷ ಹರಡಲು ಸುಳ್ಳು ಸುದ್ದಿ ಹಂಚಿಕೆ) ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋಮು ದ್ವೇಷ ಹರಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>‘ನನ್ನ ವಿರುದ್ಧದ ಎಫ್ಐಆರ್ ಮತ್ತು ಈ ಸಂಬಂಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಹರೀಶ್ ಪೂಂಜ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ಪ್ರಕರಣದ ಪ್ರತಿವಾದಿಯೂ ಆದ ದೂರುದಾರ ಎಸ್.ಬಿ. ಇಬ್ರಾಹಿಂ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿತು.</p>.<p><strong>ಪ್ರಕರಣವೇನು?:</strong> ‘ಹರೀಶ್ ಪೂಂಜ ಅವರು ಮೇ 3ರಂದು ತೆಕ್ಕಾರು ಭಟ್ರಬೈಲಿನಲ್ಲಿ, ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡು, ತುಳು ಭಾಷೆಯಲ್ಲಿ ಮಾತನಾಡುತ್ತಾ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ. ಈ ಸಂಬಂಧದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲೂ ವೀಕ್ಷಿಸಲಾಗಿದೆ’ ಎಂದು ಆರೋಪಿಸಿ ತೆಕ್ಕಾರಿನ ಎಸ್.ಬಿ. ಇಬ್ರಾಹಿಂ ಅವರು ಉಪ್ಪಿನಂಗಡಿ ಠಾಣೆಯಲ್ಲಿ ಮೇ 4ರಂದು ದೂರು ನೀಡಿದ್ದರು.</p>.<p>ದೂರನ್ನು ಆಧರಿಸಿ ಹರೀಶ್ ಪೂಂಜ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 196 (ಧರ್ಮದ ಆಧಾರದಲ್ಲಿ ದ್ವೇಷ ಹರಡುವುದು), 353(2) (ದ್ವೇಷ ಹರಡಲು ಸುಳ್ಳು ಸುದ್ದಿ ಹಂಚಿಕೆ) ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>