ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ

Published 25 ಮಾರ್ಚ್ 2024, 5:57 IST
Last Updated 25 ಮಾರ್ಚ್ 2024, 5:57 IST
ಅಕ್ಷರ ಗಾತ್ರ

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಅವರು ಇಂದು (ಸೋಮವಾರ) ಬಿಜೆಪಿ ಸೇರಿದರು.

ಇದೇ ವೇಳೆ ಅವರು ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಇತರ ನಾಯಕರು ಇದ್ದರು.

ಜನಾರ್ದನ ರೆಡ್ಡಿ ಅವರು ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಬೆಂಗಳೂರಿನ ತಮ್ಮ ನಿವಾಸ ‘ಪಾರಿಜಾತ’ದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಭಾನುವಾರ ಸಭೆ ನಡೆಸಿದ್ದರು.

ಕೆಆರ್‌ಪಿಪಿ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ದಮ್ಮೂರು ರಾಜಶೇಖರ್‌, ಬಿಜೆಪಿ ಸೇರುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ‘ ಎಂದು ಸಭೆ ಬಳಿಕ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT