ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ‘ಅರ್ಜಿದಾರರು ಫೆಬ್ರುವರಿ 7ರಂದು ಅಥಣಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದೇ ವೇಗದಲ್ಲಿ 8ರಂದು ಹೈಕೋರ್ಟ್ ಕದ ಬಡಿದು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಇದು ಮೇಲ್ನೋಟಕ್ಕೇ ಪ್ರಚಾರಪ್ರಿಯ ಅರ್ಜಿ ಎಂಬುದು ಅರಿವಾಗುತ್ತದೆ’ ಎಂದು ಆಕ್ಷೇಪಿಸಿದರು.