<p><strong>ಬಳ್ಳಾರಿ: </strong>' ಸಚಿವನಾಗುವ ಆಸೆಯನ್ನು ಸದ್ಯಕ್ಕೆ ಬಿಟ್ಟಿರುವೆ' ಎಂದು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳಿದರು.</p>.<p>ಮೂರು ತಿಂಗಳ ಬಳಿಕ ನಗರಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ' ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುವ ಸಂದರ್ಭದಲ್ಲಿ ಸೂಕ್ತ ಸ್ಥಾನಮಾನ ಕೊಡೋದಾಗಿ ನಾಯಕರು ಹೇಳಿದ್ದರು. ಇನ್ನೂ ಕಾಯುತ್ತೇನೆ ಎಂದರು.</p>.<p>'ನಾನು ಕಾಂಗ್ರೆಸ್ಗೆಸೇರ್ಪಡೆ ಆದ ಸಂದರ್ಭದಲ್ಲಿ ವಿಜಯನಗರದ ಆನಂದ್ ಸಿಂಗ್ ಕೂಡ ಸೇರಿದರು. ಸದ್ಯ ಸಚಿವ ಸ್ಥಾನದ ವಿಚಾರವನ್ನು ತಲೆಯಿಂದ ತೆಗೆದು ಹಾಕಿದ್ದೇನೆ' ಎಂದರು.</p>.<p>' ಪಕ್ಷ ತೀರ್ಮಾನ ಮಾಡಿ ಇಬ್ಬರಿಗೆ ಸಚಿವ ಸ್ಥಾನ ನೀಡಿದೆ. ನಿಗಮ ಮಂಡಳಿ ಸ್ಥಾನಕ್ಕಿಂತ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದೆ. ಈಗ ನಾನು ಸಚಿವಾಕಾಂಕ್ಷಿ ಅಲ್ಲ' ಎಂದು ಸ್ಪಷ್ಟಪಡಿಸಿದರು.</p>.<p>'ಮೂರು ತಿಂಗಳಿನಿಂದ ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲು ಆಗಲಿಲ್ಲ. ಮೂರು ತಿಂಗಳಲ್ಲಿ ಆಗದಿರುವ ಕೆಲಸವನ್ನ ಒಂದು ತಿಂಗಳಲ್ಲಿ ಮಾಡಿ ಮುಗಿಸುತ್ತೇನೆ.ನನ್ನ ಕ್ಷೇತ್ರ ಸುವರ್ಣ ಕ್ಷೇತ್ರ ಆಗಲಿದೆ ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>'ಶಾಸಕ ಗಣೇಶ್ ಮತ್ತು ಆನಂದಸಿಂಗ್ ನಡುವಿನ ಗಲಾಟೆ ಆತಂಕಕಾರಿ. ಗಣೇಶ್ ನನ್ನ ತಮ್ಮನಂತೆ. ಅವರು ಹಲ್ಲೆ ನಡೆಸುವವರಲ್ಲ. ಆನಂದ್ ಸಿಂಗ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದೆ . ಆಗ ಅವರು ನಡೆದಿದ್ದನ್ನೆಲ್ಲ ಹೇಳಿದರು. ಗಣೇಶ ಅವರನ್ನು ಕೈ ಬಿಡೋಲ್ಲ. ಇಬ್ಬರನ್ನೂ ಕೂಡಿಸಿ ರಾಜೀ ಸಂಧಾನ ಮಾಡುತ್ತೇವೆ ' ಎಂದರು.</p>.<p>'ನಮ್ಮ ಜಿಲ್ಲೆಯ ಸಮಸ್ಯೆ ನಮ್ಮಲ್ಲಿಯೇ ಬಗೆಹರಿಯಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>' ಸಚಿವನಾಗುವ ಆಸೆಯನ್ನು ಸದ್ಯಕ್ಕೆ ಬಿಟ್ಟಿರುವೆ' ಎಂದು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳಿದರು.</p>.<p>ಮೂರು ತಿಂಗಳ ಬಳಿಕ ನಗರಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ' ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುವ ಸಂದರ್ಭದಲ್ಲಿ ಸೂಕ್ತ ಸ್ಥಾನಮಾನ ಕೊಡೋದಾಗಿ ನಾಯಕರು ಹೇಳಿದ್ದರು. ಇನ್ನೂ ಕಾಯುತ್ತೇನೆ ಎಂದರು.</p>.<p>'ನಾನು ಕಾಂಗ್ರೆಸ್ಗೆಸೇರ್ಪಡೆ ಆದ ಸಂದರ್ಭದಲ್ಲಿ ವಿಜಯನಗರದ ಆನಂದ್ ಸಿಂಗ್ ಕೂಡ ಸೇರಿದರು. ಸದ್ಯ ಸಚಿವ ಸ್ಥಾನದ ವಿಚಾರವನ್ನು ತಲೆಯಿಂದ ತೆಗೆದು ಹಾಕಿದ್ದೇನೆ' ಎಂದರು.</p>.<p>' ಪಕ್ಷ ತೀರ್ಮಾನ ಮಾಡಿ ಇಬ್ಬರಿಗೆ ಸಚಿವ ಸ್ಥಾನ ನೀಡಿದೆ. ನಿಗಮ ಮಂಡಳಿ ಸ್ಥಾನಕ್ಕಿಂತ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದೆ. ಈಗ ನಾನು ಸಚಿವಾಕಾಂಕ್ಷಿ ಅಲ್ಲ' ಎಂದು ಸ್ಪಷ್ಟಪಡಿಸಿದರು.</p>.<p>'ಮೂರು ತಿಂಗಳಿನಿಂದ ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲು ಆಗಲಿಲ್ಲ. ಮೂರು ತಿಂಗಳಲ್ಲಿ ಆಗದಿರುವ ಕೆಲಸವನ್ನ ಒಂದು ತಿಂಗಳಲ್ಲಿ ಮಾಡಿ ಮುಗಿಸುತ್ತೇನೆ.ನನ್ನ ಕ್ಷೇತ್ರ ಸುವರ್ಣ ಕ್ಷೇತ್ರ ಆಗಲಿದೆ ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>'ಶಾಸಕ ಗಣೇಶ್ ಮತ್ತು ಆನಂದಸಿಂಗ್ ನಡುವಿನ ಗಲಾಟೆ ಆತಂಕಕಾರಿ. ಗಣೇಶ್ ನನ್ನ ತಮ್ಮನಂತೆ. ಅವರು ಹಲ್ಲೆ ನಡೆಸುವವರಲ್ಲ. ಆನಂದ್ ಸಿಂಗ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದೆ . ಆಗ ಅವರು ನಡೆದಿದ್ದನ್ನೆಲ್ಲ ಹೇಳಿದರು. ಗಣೇಶ ಅವರನ್ನು ಕೈ ಬಿಡೋಲ್ಲ. ಇಬ್ಬರನ್ನೂ ಕೂಡಿಸಿ ರಾಜೀ ಸಂಧಾನ ಮಾಡುತ್ತೇವೆ ' ಎಂದರು.</p>.<p>'ನಮ್ಮ ಜಿಲ್ಲೆಯ ಸಮಸ್ಯೆ ನಮ್ಮಲ್ಲಿಯೇ ಬಗೆಹರಿಯಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>