ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ದಿಷ್ಟ ದಾಳಿ ಚುನಾವಣಾ ದಾಳವಲ್ಲ: ಶಾಸಕ ಸುರೇಶ ಕುಮಾರ್

Last Updated 28 ಫೆಬ್ರುವರಿ 2019, 11:32 IST
ಅಕ್ಷರ ಗಾತ್ರ

ದಾವಣಗೆರೆ: ಉಗ್ರರ ಮೇಲಿನ ನಿರ್ದಿಷ್ಟ ದಾಳಿ ಪ್ರಕರಣವನ್ನು ಬಿಜೆಪ ಚುನಾವಣೆಯ ದಾಳವನ್ನಾಗಿ ಮಾಡಿಕೊಳ್ಳುವುದಿಲ್ಲ ಎಂದು ರಾಜಾಜಿನಗರದ ಶಾಸಕ ಸುರೇಶ ಕುಮಾರ್ ಸ್ಪಷ್ಟಪಡಿಸಿದರು.

ವಿರೋಧ ಪಕ್ಷಗಳ ಆರೋಪಕ್ಕೆ ಗುರುವಾರ ಇಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ನಮಗೆ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ. ಬಿಜೆಪಿಯ ಯಾವುದೇ ನಾಯಕರು ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಹೇಳಿದರು. ಜಿನೇವಾ ಒಪ್ಪಂದದಂತೆ ಪಾಕಿಸ್ತಾನವು ಭಾರತೀಯ ವಾಯುಪಡೆಯ ವಿಂಗ್‌ ಕಮಾಂಡರ್ ಅಭಿನವ್‌ ಅವರನ್ನು ಗೌರವಯುತವಾಗಿ ದೇಶಕ್ಕೆ ವಾಪಸ್ ಕಳುಹಿಸಿಕೊಡಬೇಕು. ಪಾಕಿಸ್ತಾನದ ಸೈನಿಕರ ಬಂಧನದಲ್ಲಿದ್ದರೂ ಅಭಿನವ್ ತೋರಿದ ಶೌರ್ಯಕ್ಕೆ ದೇಶದ ಜನ ಅವರಿಗೆ ಸಲಾಮು ಹೊಡೆಯುತ್ತಾರೆ’ಎಂದು ತಿಳಿಸಿದರು.

ಉಗ್ರರ ಮೇಲೆ ನಿರ್ದಿಷ್ಟ ದಾಳಿ ನಡೆಸಿದ್ದು ಮಾನವೀಯತೆಯ ಲಕ್ಷಣವಲ್ಲ ಎಂದು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ನೀಡಿದ ಹೇಳಿಕೆಗೆ, ‘ಪ್ರಾಯಶಃ ಮನಗೂಳಿ ಅವರಿಗೆ ಮರೆಗುಳಿ ರೋಗ ಇರಬೇಕು. ದೇಶದ ಸಾಮಾನ್ಯ ಜನರ ಭಾವನೆ ಅವರಿಗೆ ಅರ್ಥವಾಗುತ್ತಿಲ್ಲ. ಉಗ್ರರ ಮೂಲವನ್ನೇ ನಿರ್ಮೂಲನೆ ಮಾಡಬೇಕು ಎಂದು ಬಯಸುತ್ತಿದ್ದಾರೆ. ಧಾರಾವಾಹಿಯಂತೆ ಕಂತಿನ ಮೇಲೆ ಕಾರ್ಯಾಚರಣೆ ನಡೆಸಬೇಕಿತ್ತೇ’ ಎಂದು ಮರು ಪ್ರಶ್ನೆ ಹಾಕಿದರು.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳನ್ನು ಬೆಂಬಲಿಸಿದರೆ ಸಂಸತ್ತಿನಲ್ಲಿ ಕನ್ನಡಿಗರ ಧ್ವನಿ ಕೇಳಿಸಲಿದೆ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಕುರಿತ ಪ್ರಶ್ನೆಗೆ, ‘ಭಾಷೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ಬಿಜೆಪಿಯ 17 ಸಂಸದರೂ ಕನ್ನಡಿಗರೇ ಆಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನೂರಕ್ಕೆ ನೂರರಷ್ಟು ಕನ್ನಡಿಗ ಅಭ್ಯರ್ಥಿಗಳನ್ನೇ ನಿಲ್ಲಿಸಲಾಗುವುದು. ಎಲ್ಲರೂ ರಾಜ್ಯದ ನೆಲ, ಜಲ ಸಂರಕ್ಷಣೆಗೆ ಬದ್ಧರಾಗಿರುತ್ತಾರೆ’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT