<p><strong>ಬೆಂಗಳೂರು</strong>: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಶುಕ್ರವಾರ ಇಲ್ಲಿನ ಜನಪ್ರತಿನಿಧಿಗಳ ಕೋರ್ಟ್ಗೆ ಶರಣಾದರು.</p>.<p>ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಬೆಳಿಗ್ಗೆ, 'ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಶರಣಾದ ವಿನಯ ಕುಲಕರ್ಣಿ ಅವರನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.</p>.<p>‘ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪದಡಿ ವಿನಯ ಕುಲಕರ್ಣಿ ಅವರ ಜಾಮೀನು ರದ್ದುಪಡಿಸಬೇಕು’ ಎಂದು ಸಿಬಿಐ ಕೋರಿತ್ತು. ಈ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದಾಗಿದೆ.</p>.<p><strong>ಪ್ರಕರಣವೇನು?</strong></p><p>ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಶುಕ್ರವಾರ ಇಲ್ಲಿನ ಜನಪ್ರತಿನಿಧಿಗಳ ಕೋರ್ಟ್ಗೆ ಶರಣಾದರು.</p>.<p>ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಬೆಳಿಗ್ಗೆ, 'ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಶರಣಾದ ವಿನಯ ಕುಲಕರ್ಣಿ ಅವರನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.</p>.<p>‘ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪದಡಿ ವಿನಯ ಕುಲಕರ್ಣಿ ಅವರ ಜಾಮೀನು ರದ್ದುಪಡಿಸಬೇಕು’ ಎಂದು ಸಿಬಿಐ ಕೋರಿತ್ತು. ಈ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದಾಗಿದೆ.</p>.<p><strong>ಪ್ರಕರಣವೇನು?</strong></p><p>ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>