ವಿಧಾನಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ನ ಪುಟ್ಟಣ್ಣ ವಿರುದ್ಧ ಮೈತ್ರಿಕೂಟದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆದಿತ್ತು. ಅದು, ಅಂತಿಮಗೊಳ್ಳುವ ಮೊದಲೇ, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಚುನಾವಣೆ ಎದುರಾಗುವ ಮೊದಲೇ ಎರಡೂ ಪಕ್ಷಗಳ ಮಧ್ಯೆ ಸಮನ್ವಯ ಇಲ್ಲದೇ ಇರುವುದನ್ನು ಇದು ತೋರಿಸಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆದಿದೆ.