<p><strong>ನವದೆಹಲಿ</strong>: ರಾಜ್ಯ ವಿಧಾನ ಪರಿಷತ್ ನ ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಬುಧವಾರ ಪ್ರಕಟಿಸಿದೆ.</p>.<p>ಜಿ.ಮಾದೇಗೌಡ ಅವರ ಪುತ್ರ ಮದ್ದೂರಿನ ಮಧು ಮಾದೇಗೌಡ ಅವರಿಗೆ ದಕ್ಷಿಣ ಪದವೀಧರ ಕ್ಷೇತ್ರದಿಂದ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಗುರಿಕಾರ ಅವರಿಗೆ ಟಿಕೆಟ್ ನೀಡಿ ಆದೇಶ ಹೊರಡಿಸಲಾಗಿದೆ.</p>.<p>ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ರಾಷ್ಟ್ರೀಯ ಸಂಘದ ಉಪಾಧ್ಯಕ್ಷರಾಗಿರುವ ಗುರಿಕಾರ ಅವರು ಇತ್ತೀಚೆಗೆ ನಡೆದಿದ್ದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.</p>.<p>ಪಕ್ಷದಿಂದ ಸ್ಪರ್ಧಿಸಿದ್ದ ತನ್ನ ಅಭ್ಯರ್ಥಿಯನ್ನು ಕೊನೆಯ ಕ್ಷಣದಲ್ಲಿ ಕಣದಿಂದ ನಿವೃತ್ತಗೊಳಿಸಿದ್ದ ಜೆಡಿಎಸ್, ಗುರಿಕಾರ ಅವರನ್ನು ಬೆಂಬಲಿಸಿತ್ತು.</p>.<p>ವಿಧಾನ ಪರಿಷತ್ ನ ಈ ಎರಡೂ ಸ್ಥಾನಗಳು 2022ರ ಜುಲೈ 4ರಂದು ಖಾಲಿ ಆಗಲಿದೆ. ಅದಕ್ಕಿಂತ ಮೊದಲು ಜೂನ್ ಮೊದಲ ಅಥವಾ ಎರಡನೇ ವಾರ ಚುನಾವಣೆ ನಡೆಯಲಿದೆ.</p>.<p>ಪ್ರಸ್ತುತದಕ್ಷಿಣ ಪದವೀಧರ ಕ್ಷೇತ್ರವನ್ನು ಜೆಡಿಎಸ್ನಿಂದ ಕೆ.ಟಿ ಶ್ರೀಕಂಠೇಗೌಡ ಅವರು ಪ್ರತಿನಿಧಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರವನ್ನು ಸಭಾಪತಿಯೂ ಆಗಿರುವ ಜೆಡಿಎಸ್ನ ಬಸವರಾಜ ಹೊರಟ್ಟಿ ಪ್ರತಿನಿಧಿಸಿದ್ದಾರೆ.</p>.<p><a href="https://www.prajavani.net/karnataka-news/bk-hariprasad-appointed-leader-of-karnataka-legislative-council-905392.html" itemprop="url">ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜ್ಯ ವಿಧಾನ ಪರಿಷತ್ ನ ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಬುಧವಾರ ಪ್ರಕಟಿಸಿದೆ.</p>.<p>ಜಿ.ಮಾದೇಗೌಡ ಅವರ ಪುತ್ರ ಮದ್ದೂರಿನ ಮಧು ಮಾದೇಗೌಡ ಅವರಿಗೆ ದಕ್ಷಿಣ ಪದವೀಧರ ಕ್ಷೇತ್ರದಿಂದ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಗುರಿಕಾರ ಅವರಿಗೆ ಟಿಕೆಟ್ ನೀಡಿ ಆದೇಶ ಹೊರಡಿಸಲಾಗಿದೆ.</p>.<p>ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ರಾಷ್ಟ್ರೀಯ ಸಂಘದ ಉಪಾಧ್ಯಕ್ಷರಾಗಿರುವ ಗುರಿಕಾರ ಅವರು ಇತ್ತೀಚೆಗೆ ನಡೆದಿದ್ದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.</p>.<p>ಪಕ್ಷದಿಂದ ಸ್ಪರ್ಧಿಸಿದ್ದ ತನ್ನ ಅಭ್ಯರ್ಥಿಯನ್ನು ಕೊನೆಯ ಕ್ಷಣದಲ್ಲಿ ಕಣದಿಂದ ನಿವೃತ್ತಗೊಳಿಸಿದ್ದ ಜೆಡಿಎಸ್, ಗುರಿಕಾರ ಅವರನ್ನು ಬೆಂಬಲಿಸಿತ್ತು.</p>.<p>ವಿಧಾನ ಪರಿಷತ್ ನ ಈ ಎರಡೂ ಸ್ಥಾನಗಳು 2022ರ ಜುಲೈ 4ರಂದು ಖಾಲಿ ಆಗಲಿದೆ. ಅದಕ್ಕಿಂತ ಮೊದಲು ಜೂನ್ ಮೊದಲ ಅಥವಾ ಎರಡನೇ ವಾರ ಚುನಾವಣೆ ನಡೆಯಲಿದೆ.</p>.<p>ಪ್ರಸ್ತುತದಕ್ಷಿಣ ಪದವೀಧರ ಕ್ಷೇತ್ರವನ್ನು ಜೆಡಿಎಸ್ನಿಂದ ಕೆ.ಟಿ ಶ್ರೀಕಂಠೇಗೌಡ ಅವರು ಪ್ರತಿನಿಧಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರವನ್ನು ಸಭಾಪತಿಯೂ ಆಗಿರುವ ಜೆಡಿಎಸ್ನ ಬಸವರಾಜ ಹೊರಟ್ಟಿ ಪ್ರತಿನಿಧಿಸಿದ್ದಾರೆ.</p>.<p><a href="https://www.prajavani.net/karnataka-news/bk-hariprasad-appointed-leader-of-karnataka-legislative-council-905392.html" itemprop="url">ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>