‘ಹೆಂಡತಿ ಮತ್ತು ಮಗಳನ್ನು ಮೈಸೂರು, ಬೆಂಗಳೂರು, ತಮಿಳುನಾಡಿನಲ್ಲಿ ಸುಮಾರು ಆರು ತಿಂಗಳು ಬಚ್ಚಿಟ್ಟಿದ್ದ. ನನ್ನ ಹಣವನ್ನು ಹೊಡೆಯಲು ಈ ಕೃತ್ಯ ಮಾಡಿದ್ದ. ನನ್ನ ಮೇಲೆ ಕೌಟುಂಬಿಕ ದೌರ್ಜನ್ಯ ಕೇಸ್ ಹಾಕಿಸಿದರು. ₹1,000 ಕೋಟಿ ಪರಿಹಾರ ಕೇಳಿದರು. ಹೆಂಡತಿಗೆ ಬುದ್ದಿವಾದ ಹೇಳಿದೆ. ಬಳಿಕ ಹೆಂಡತಿ ಪ್ರಕರಣವನ್ನು ಹಿಂದಕ್ಕೆ ಪಡೆದಳು. ಇವೆಲ್ಲ ಮಾಡಿಸಿದ್ದು ನವೀದ್’ ಎಂದು ಯುಸೂಫ್ ಕಣ್ಣೀರು ಹಾಕಿದರು.