ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಖಾಸಗಿ ಶಿಕ್ಷಕರಿಗೆ ಈ ಬಾರಿಯ ಆರ್ಥಿಕ ಪ್ಯಾಕೇಜ್ನಲ್ಲಿ ಯಾವುದೇ ಪರಿಹಾರ ನೀಡದ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಪುಟ್ಟಣ್ಣ, ‘ಪದೇ ಪದೇ ಮನವಿ ಮಾಡಿಕೊಂಡಾಗ್ಯೂ ಸರ್ಕಾರ ಖಾಸಗಿ ಶಾಲೆಗಳ ಶಿಕ್ಷಕರ ನೋವಿಗೆ ಸ್ಪಂದಿಸಿಲ್ಲ. ಹೀಗಾಗಿ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದವರು ರಾಜೀನಾಮೆ ನೀಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಡ ಹೆಚ್ಚಾಗುತ್ತಿದೆ. ನಾನೂ ಈ ಬಗ್ಗೆ ಚಿಂತನೆ ನಡೆಸಿದ್ದೇನೆ’ ಎಂದರು.