ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ ಸಂಸದ ಭಗವಂತ ಖೂಬಾ ಕೇಂದ್ರ ಸಂಪುಟಕ್ಕೆ

Last Updated 7 ಜುಲೈ 2021, 9:02 IST
ಅಕ್ಷರ ಗಾತ್ರ

ನವದೆಹಲಿ: ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಪ್ರಧಾನಿ ಕಚೇರಿಯಿಂದ ಬುಧವಾರ ಮಧ್ಯಾಹ್ನ ಕರೆ‌ ಬಂದಿದ್ದು, ಕೇಂದ್ರ ಸಂಪುಟ ಸೇರ್ಪಡೆ ಖಾತರಿಯಾಗಿದೆ.

ಕ್ಷೇತ್ರದಲ್ಲಿದ್ದ ಖೂಬಾ ಅವರು ಕರೆ ಬಂದ ಹಿನ್ನೆಲೆಯಲ್ಲಿ, ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ‌ ಸಮಾರಂಭದಲ್ಲಿ ಭಾಗವಹಿಸಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಯತ್ತ ಹೊರಟಿದ್ದಾರೆ.ಹೈದರಾಬಾದ್ ನಿಂದ ವಿಮಾನದ ಮೂಲಕ ಅವರು ದೆಹಲಿಗೆ‌ ಬರಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ.ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ರಾಜೀನಾಮೆ ನೀಡಿದ್ದಾರೆ.

ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌ ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ರಾಜ್ಯ ಸಚಿವರಾದ ದೇಬಶ್ರೀ ಚೌಧುರಿ ಸಹ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT