ಅಯೋಧ್ಯೆಯ ಬಾಲರಾಮನನ್ನು ತಿರಸ್ಕರಿಸಿದವರನ್ನು ಕರ್ನಾಟಕದ ಜನ ಎಂದಿಗೂ ಒಪ್ಪಿಕೊಳ್ಳಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶಿರಸಿಯಲ್ಲಿ ಹೇಳಿದರು. ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 'ಕದಂಬ ರಾಜರು ಕನ್ನಡ ನಾಡನ್ನು ಆಳಿದರು. ಅವರ ಕೊಡುಗೆಯನ್ನು ಜನರು ಎಂದಿಗೂ ಮರೆಯಲಾರರು. ಇಂತ ನೂರಾರು ರಾಜ ವಂಶಗಳು ದೇಶವನ್ನು ಕಟ್ಟಿದರು. ಇಂತಹ ರಾಜ ವಂಶಸ್ಥರು ದೇಶ ಲೂಟಿ ಮಾಡಿದವರು ಎಂದು ಟೀಕಿಸುವುದನ್ನು ಜನರು ಸಹಿಸಬಲ್ಲರೆ?' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರು ಪ್ರಸ್ತಾಪಿಸದೆ ಅವರ ಹೇಳಿಕೆಗೆ ತಿರುಗೇಟು ನೀಡಿದರು.