<p><strong>ನವದೆಹಲಿ:</strong> 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿದ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ಸಲ್ಲಿಸಿದ್ದಾರೆ.</p>.<p>ಸಂಸತ್ನಲ್ಲಿ ಬೆಳಿಗ್ಗೆ ನಡೆದ ಬಿಜೆಪಿ ಸಂಸದರ ಸಾಪ್ತಾಹಿಕ ಸಭೆಯಲ್ಲಿ ಕರ್ನಾಟಕದ ಉಪ ಚುನಾವಣೆಯ ಗೆಲುವನ್ನು ಪ್ರಸ್ತಾಪಿಸಿದ ಮೋದಿ ಎದ್ದು ನಿಂತು ಗೌರವ ಸೂಚಿಸಿದರಲ್ಲದೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಸಂಪುಟದ ಸದಸ್ಯರನ್ನು ಅಭಿನಂದಿಸಿದರು.</p>.<p>‘ಆರು ತಿಂಗಳ ಅಧಿಕಾರ ಅವಧಿ ಪೂರೈಸಿದ ಮೋದಿ ಅವರಿಗೆ ಎಲ್ಲ ಸಂಸದರೂ ಎದ್ದು ನಿಂತು ಗೌರವ ಸೂಚಿಸಿದೆವು. ನಂತರ ಪ್ರಧಾನಿಯವರೇ ಎದ್ದು ನಿಂತು ಕರ್ನಾಟಕದ ಜನರನ್ನು ಗೌರವಿಸಿದರು' ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗಾರರಿಗೆ ತಿಳಿಸಿದರು.</p>.<p>ವಿಶೇಷವಾಗಿ ಚಿಕ್ಕಬಳ್ಳಾಪುರ ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರಗಳ ಮತದಾರರನ್ನು ಕೊಂಡಾಡಿದ ಪ್ರಧಾನಿ, ಆ ಎರಡೂ ಜಿಲ್ಲೆಗಳಲ್ಲಿ ಪಕ್ಷಕ್ಕೆ ದೊರೆಯದಿದ್ದ ಜಯ ಮೊದಲ ಬಾರಿಗೆ ದೊರೆತಿರುವುದು ಅಭಿನಂದನೀಯ ಎಂದು ಸ್ಮರಿಸಿದ್ದಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿದ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ಸಲ್ಲಿಸಿದ್ದಾರೆ.</p>.<p>ಸಂಸತ್ನಲ್ಲಿ ಬೆಳಿಗ್ಗೆ ನಡೆದ ಬಿಜೆಪಿ ಸಂಸದರ ಸಾಪ್ತಾಹಿಕ ಸಭೆಯಲ್ಲಿ ಕರ್ನಾಟಕದ ಉಪ ಚುನಾವಣೆಯ ಗೆಲುವನ್ನು ಪ್ರಸ್ತಾಪಿಸಿದ ಮೋದಿ ಎದ್ದು ನಿಂತು ಗೌರವ ಸೂಚಿಸಿದರಲ್ಲದೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಸಂಪುಟದ ಸದಸ್ಯರನ್ನು ಅಭಿನಂದಿಸಿದರು.</p>.<p>‘ಆರು ತಿಂಗಳ ಅಧಿಕಾರ ಅವಧಿ ಪೂರೈಸಿದ ಮೋದಿ ಅವರಿಗೆ ಎಲ್ಲ ಸಂಸದರೂ ಎದ್ದು ನಿಂತು ಗೌರವ ಸೂಚಿಸಿದೆವು. ನಂತರ ಪ್ರಧಾನಿಯವರೇ ಎದ್ದು ನಿಂತು ಕರ್ನಾಟಕದ ಜನರನ್ನು ಗೌರವಿಸಿದರು' ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗಾರರಿಗೆ ತಿಳಿಸಿದರು.</p>.<p>ವಿಶೇಷವಾಗಿ ಚಿಕ್ಕಬಳ್ಳಾಪುರ ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರಗಳ ಮತದಾರರನ್ನು ಕೊಂಡಾಡಿದ ಪ್ರಧಾನಿ, ಆ ಎರಡೂ ಜಿಲ್ಲೆಗಳಲ್ಲಿ ಪಕ್ಷಕ್ಕೆ ದೊರೆಯದಿದ್ದ ಜಯ ಮೊದಲ ಬಾರಿಗೆ ದೊರೆತಿರುವುದು ಅಭಿನಂದನೀಯ ಎಂದು ಸ್ಮರಿಸಿದ್ದಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>