ಕೇಂದ್ರದಿಂದ ತಾರತಮ್ಯ:‘ಲಸಿಕೆ, ಔಷಧಿ, ವೆಂಟಿಲೇಟರ್ ಮತ್ತು ಆಮ್ಲಜನಕ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎನ್ನುವ ವಿಚಾರದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಎಚ್.ಡಿ. ಕುಮಾರಸ್ವಾಮಿ ಕೂಡ ಹಲವು ಬಾರಿ ಮಾತನಾಡಿದ್ದಾರೆ. ಹಣಕಾಸು ಹಂಚಿಕೆಯಲ್ಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ’ ಎಂದು ಆರೋಪಿಸಿದರು.