<p><strong>ಬೆಂಗಳೂರು</strong>: ರಾಜ್ಯದಲ್ಲಿರುವಮೊಗವೀರ ಸಮುದಾಯಕ್ಕೂ ಸರ್ಕಾರ ವಿಶೇಷ ಮೀಸಲಾತಿ ನೀಡಬೇಕು ಹಾಗೂ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರರ ಸಾಲ ಮನ್ನಾ ಮಾಡುವಂತೆದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಹಾಗೂಆಳಸಮುದ್ರ ಮೀನುಗಾರರ ಸಂಘಗಳು ಒತ್ತಾಯಿಸಿವೆ.</p>.<p>ನಗರದಲ್ಲಿ ಸಂಘಗಳ ಪದಾಧಿಕಾರಿಗಳು ಬುಧವಾರ ಜಂಟಿ ಸುದ್ದಿಗೋಷ್ಠಿ ನಡೆಸಿದರು.</p>.<p>ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್,‘ ಮೊಗವೀರರ ಕುಲಕಸುಬು ಮೀನುಗಾರಿಕೆ. ಇತ್ತೀಚಿನ ವರ್ಷಗಳಲ್ಲಿ ಮತ್ಸ್ಯೋದ್ಯಮ ನೆಲಕಚ್ಚಿದೆ.ಚಂಡಮಾರುತಗಳ ಅಬ್ಬರ, ತೈಲ ದರ ಏರಿಕೆಯಿಂದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಮಾಡಲಾಗದೆ, ಶೇ 90ರಷ್ಟು ಮೀನುಗಾರರು ಸಂಕಷ್ಟದಲ್ಲಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಹವಾಮಾನ ವೈಪರೀತ್ಯ, ಪರಿಸರ ಮಾಲಿನ್ಯದಿಂದ ಒಂದು ಬಾರಿ ಮೀನುಗಾರಿಕೆಗೆ 12 ದಿನ ಸಮುದ್ರದಲ್ಲೇ ಕಳೆಯುವಂತಾಗಿದೆ. ನೂರಾರು ಕಿ.ಮೀ ದೂರದವರೆಗೆ ಸಮುದ್ರ ಯಾನ ಮಾಡುವ ಅನಿವಾರ್ಯ ಸೃಷ್ಟಿಯಾಗಿದೆ. ಇದಕ್ಕಾಗಿ ಸಂಕಷ್ಟದಲ್ಲಿರುವ ಮೀನುಗಾರರ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರ ನೀಡುತ್ತಿರುವ ಕರ ರಿಯಾಯಿತಿ ಡೀಸೆಲ್ ಪೂರೈಕೆ ಪದ್ಧತಿ ನಿಲ್ಲಿಸಿ, ವಾರ್ಷಿಕ ಕೋಟಾದಲ್ಲಿ ಡೀಸೆಲ್ ನೀಡಬೇಕು. ನಾಡದೋಣಿ ಮೀನುಗಾರರಿಗೆ ಕರ ರಹಿತ ಅಗತ್ಯ ಸೀಮೆಎಣ್ಣೆ ನೀಡಬೇಕು. ಮೀನುಗಾರಿಗೆ ಶೇ 4ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಬೇಕು.</p>.<p>ಕಾರ್ಯದರ್ಶಿ ಸುಧಾಕರ್ ಕುಂದರ್, ‘ಶೇ 75ರಷ್ಟು ಮೀನುಗಾರಿಕೆ ಬೋಟ್ಗಳು ಡೀಸೆಲ್ ಅನ್ನು ಅವಲಂಬಿಸಿವೆ.ತೈಲ ದರ ಏರಿಕೆಯಿಂದಮೀನುಗಾರಿಕೆಗೆ ದೊಡ್ಡ ಪೆಟ್ಟು ಬಿದ್ದಿದೆ. ಕೂಡಲೇ ಸರ್ಕಾರ ಮೀನುಗಾರರ ನೆರವಿಗೆ ಬರಬೇಕು’ ಎಂದು ಮನವಿ ಮಾಡಿದರು.</p>.<p>‘ಮತ್ಸ್ಯ ಕ್ಷಾಮದಿಂದ ಉದ್ಯೋಗ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಬೇಕು. ಮೀನುಗಾರರು ಬಳಸುವ ಡೀಸೆಲ್ ಮೇಲಿನ ರಸ್ತೆ ತೆರಿಗೆ ಕಡಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಎಲ್ಲತಾಲ್ಲೂಕುಗಳಲ್ಲಿ ಸ್ವಚ್ಛ ಮೀನು ಮಾರುಕಟ್ಟೆ ನಿರ್ಮಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ, ಮೀನುಗಾರಿಕೆ ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು’ ಎಂದು ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಅಶೋಕ್ ಹಾಗೂ ಮೊಗವೀರ ಸಂಘದ ಸದಸ್ಯರು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿರುವಮೊಗವೀರ ಸಮುದಾಯಕ್ಕೂ ಸರ್ಕಾರ ವಿಶೇಷ ಮೀಸಲಾತಿ ನೀಡಬೇಕು ಹಾಗೂ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರರ ಸಾಲ ಮನ್ನಾ ಮಾಡುವಂತೆದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಹಾಗೂಆಳಸಮುದ್ರ ಮೀನುಗಾರರ ಸಂಘಗಳು ಒತ್ತಾಯಿಸಿವೆ.</p>.<p>ನಗರದಲ್ಲಿ ಸಂಘಗಳ ಪದಾಧಿಕಾರಿಗಳು ಬುಧವಾರ ಜಂಟಿ ಸುದ್ದಿಗೋಷ್ಠಿ ನಡೆಸಿದರು.</p>.<p>ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್,‘ ಮೊಗವೀರರ ಕುಲಕಸುಬು ಮೀನುಗಾರಿಕೆ. ಇತ್ತೀಚಿನ ವರ್ಷಗಳಲ್ಲಿ ಮತ್ಸ್ಯೋದ್ಯಮ ನೆಲಕಚ್ಚಿದೆ.ಚಂಡಮಾರುತಗಳ ಅಬ್ಬರ, ತೈಲ ದರ ಏರಿಕೆಯಿಂದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಮಾಡಲಾಗದೆ, ಶೇ 90ರಷ್ಟು ಮೀನುಗಾರರು ಸಂಕಷ್ಟದಲ್ಲಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಹವಾಮಾನ ವೈಪರೀತ್ಯ, ಪರಿಸರ ಮಾಲಿನ್ಯದಿಂದ ಒಂದು ಬಾರಿ ಮೀನುಗಾರಿಕೆಗೆ 12 ದಿನ ಸಮುದ್ರದಲ್ಲೇ ಕಳೆಯುವಂತಾಗಿದೆ. ನೂರಾರು ಕಿ.ಮೀ ದೂರದವರೆಗೆ ಸಮುದ್ರ ಯಾನ ಮಾಡುವ ಅನಿವಾರ್ಯ ಸೃಷ್ಟಿಯಾಗಿದೆ. ಇದಕ್ಕಾಗಿ ಸಂಕಷ್ಟದಲ್ಲಿರುವ ಮೀನುಗಾರರ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರ ನೀಡುತ್ತಿರುವ ಕರ ರಿಯಾಯಿತಿ ಡೀಸೆಲ್ ಪೂರೈಕೆ ಪದ್ಧತಿ ನಿಲ್ಲಿಸಿ, ವಾರ್ಷಿಕ ಕೋಟಾದಲ್ಲಿ ಡೀಸೆಲ್ ನೀಡಬೇಕು. ನಾಡದೋಣಿ ಮೀನುಗಾರರಿಗೆ ಕರ ರಹಿತ ಅಗತ್ಯ ಸೀಮೆಎಣ್ಣೆ ನೀಡಬೇಕು. ಮೀನುಗಾರಿಗೆ ಶೇ 4ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಬೇಕು.</p>.<p>ಕಾರ್ಯದರ್ಶಿ ಸುಧಾಕರ್ ಕುಂದರ್, ‘ಶೇ 75ರಷ್ಟು ಮೀನುಗಾರಿಕೆ ಬೋಟ್ಗಳು ಡೀಸೆಲ್ ಅನ್ನು ಅವಲಂಬಿಸಿವೆ.ತೈಲ ದರ ಏರಿಕೆಯಿಂದಮೀನುಗಾರಿಕೆಗೆ ದೊಡ್ಡ ಪೆಟ್ಟು ಬಿದ್ದಿದೆ. ಕೂಡಲೇ ಸರ್ಕಾರ ಮೀನುಗಾರರ ನೆರವಿಗೆ ಬರಬೇಕು’ ಎಂದು ಮನವಿ ಮಾಡಿದರು.</p>.<p>‘ಮತ್ಸ್ಯ ಕ್ಷಾಮದಿಂದ ಉದ್ಯೋಗ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಬೇಕು. ಮೀನುಗಾರರು ಬಳಸುವ ಡೀಸೆಲ್ ಮೇಲಿನ ರಸ್ತೆ ತೆರಿಗೆ ಕಡಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಎಲ್ಲತಾಲ್ಲೂಕುಗಳಲ್ಲಿ ಸ್ವಚ್ಛ ಮೀನು ಮಾರುಕಟ್ಟೆ ನಿರ್ಮಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ, ಮೀನುಗಾರಿಕೆ ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು’ ಎಂದು ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಅಶೋಕ್ ಹಾಗೂ ಮೊಗವೀರ ಸಂಘದ ಸದಸ್ಯರು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>