ಬಾನು ಕಿರುಪರಿಚಯ: 1948ರಲ್ಲಿ ಜನಿಸಿದ ಬಾನು, ಕರ್ನಾಟಕದ ಹಾಸನ ಜಿಲ್ಲೆಯವರು. ಸಮಕಾಲೀನ ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಮಹಿಳೆಯರ ಅನುಭವಗಳನ್ನು ಕಟ್ಟಿಕೊಡುವ ಕಥೆಗಾರರಾಗಿ ಖ್ಯಾತಿಯನ್ನು ಗಳಿಸಿದ್ದಾರೆ. ವಕೀಲೆಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಜಾತಿ ಧರ್ಮದ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆಯ ವಿರುದ್ಧ ಧ್ವನಿಗೂಡಿಸುವ ಕಾರ್ಯಕರ್ತೆಯಾಗಿ ಹಾಗೂ ಪತ್ರಕರ್ತೆಯಾಗಿಯೂ ಹೆಸರುವಾಸಿಯಾಗಿದ್ದಾರೆ. ಬಂಡಾಯ ಸಾಹಿತ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಬಾನು, ಶಿಕ್ಷಣ ಕ್ಷೇತ್ರದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವಂತೆ ಒತ್ತಾಯಿಸಿ ಗೋಕಾಕ್ ಚಳುವಳಿ ಮತ್ತು 80ರ ದಶಕದ ರೈತರ ಆಂದೋಲನದಲ್ಲಿಯೂ ಮುಂಚೂಣಿಯಲ್ಲಿದ್ದರು.