2022–23 ನೇ ಆರ್ಥಿಕ ವರ್ಷದ ಅವಧಿಯಲ್ಲಿ ಕೋವಿಡ್ ಅಲೆಗಳ ಪರಿಣಾಮ, ಮಂದಗತಿಯ ಆರ್ಥಿಕ ಚೇತರಿಕೆ ಕಾರಣದಿಂದ ರಾಜಸ್ವ ಕೊರತೆ ಆಗಬಹುದು. ಅಲ್ಲದೆ, ಈ ಅವಧಿಯಲ್ಲಿ ಒಟ್ಟು ಹೊಣೆಗಾರಿಕೆ (ಸಾಲ) ಅಂದಾಜು ಒಟ್ಟು ಆಂತರಿಕ ಉತ್ಪನ್ನದ ಶೇ 25 ರಷ್ಟು ಮೀರಬಹುದು ಎಂಬ ಕಾರಣಕ್ಕಾಗಿ ಈ ಮಸೂದೆ ಮಂಡಿಸಿರುವುದಾಗಿ ಮುಖ್ಯಮಂತ್ರಿಯವರು ತಿಳಿಸಿದರು.