ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಗ್ಗೆ ಮಾತನಾಡಿದ ಅವರು, ‘ಶಾ ಬಂದರೆ ಸರ್ಕಾರದಲ್ಲಿ ಯಾವುದೇ ಬದಲಾವಣೆ ಆಗಲ್ಲ. ಯಾಕೆಂದರೆ ಸರ್ಕಾರ ಸತ್ತು ಹೋಗಿದೆ. ಅನಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ದುರಸ್ತಿಗೆ ಹಣ ಬಿಡುಗಡೆ ಮಾಡಿಲ್ಲ. ನೀರಾವರಿ ಯೋಜನೆಗಳೆಲ್ಲ ಸ್ಥಗಿತಗೊಂಡಿದೆ, ವಿದ್ಯಾರ್ಥಿ ವೇತನ ಕೊಡುತ್ತಿಲ್ಲ. ರಸ್ತೆ ಕಾಮಗಾರಿಗಳು ಕೂಡಾ ನಡೆಯುತ್ತಿಲ್ಲ. ಜನರು ಚುನಾವಣೆ ಬರಲಿ ಎಂದು ಕಾಯುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ’ ಎಂದರು.