<p>ಅರಕಲಗೂಡು: ‘ಎಲ್ಲ ಚುನಾವಣೆಗಳಲ್ಲಿ ಹಣ ಖರ್ಚಾಗುತ್ತದೆ. ಯಾವ ಚುನಾವಣೆಯಲ್ಲಿ ಹಣದ ಹೊಳೆ ಹರಿದಿಲ್ಲ ಎಂಬುದನ್ನು ಎಚ್.ಡಿ.ರೇವಣ್ಣ ತಿಳಿಸಲಿ’ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಶುಕ್ರವಾರ ಇಲ್ಲಿ ಸವಾಲು ಹಾಕಿದರು.</p>.<p>ಬಿಜೆಪಿಯವರು ಉಪಚುನಾವಣೆಗೆ ₹ 750 ಕೋಟಿ ಖರ್ಚು ಮಾಡಿದ್ದಾರೆ ಎಂಬ ಜೆಡಿಎಸ್ ಶಾಸಕ ರೇವಣ್ಣ ಆರೋಪಕ್ಕೆ ತಿರುಗೇಟು ನೀಡಿದ ಅವರು, ‘ಚುನಾವಣೆಯಲ್ಲಿ ನಾವು ಗೆದ್ದಿರುವುದನ್ನು ಅವರು ಒಪ್ಪಿಕೊಳ್ಳಬೇಕು’ ಎಂದು ಕುಟುಕಿದರು.</p>.<p>‘ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ ಆಶ್ವಾಸನೆಯಂತೆ ನೂತನ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ. ಈ ಕುರಿತು ಐದಾರು ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ಕಲ್ಪಿಸುವ ಕುರಿತು ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದರು.</p>.<p>‘ಸರ್ಕಾರಕ್ಕೆ, 100 ದಿನಗಳಲ್ಲಿ ಉತ್ತಮ ಕೆಲಸ ಮಾಡಲು ಸಾಧ್ಯವಾಗಿರಲಿಲ್ಲ. ಈಗ ರಾಜ್ಯದಲ್ಲಿ ಸ್ಥಿರ ಸರ್ಕಾರವಿದ್ದು, ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಕೇಂದ್ರ ಸರ್ಕಾರ ಕೂಡ ಅನುದಾನ ಒದಗಿಸುವಲ್ಲಿ ಯಾವುದೇ ತಾರತಮ್ಯ ಎಸಗುತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಕಲಗೂಡು: ‘ಎಲ್ಲ ಚುನಾವಣೆಗಳಲ್ಲಿ ಹಣ ಖರ್ಚಾಗುತ್ತದೆ. ಯಾವ ಚುನಾವಣೆಯಲ್ಲಿ ಹಣದ ಹೊಳೆ ಹರಿದಿಲ್ಲ ಎಂಬುದನ್ನು ಎಚ್.ಡಿ.ರೇವಣ್ಣ ತಿಳಿಸಲಿ’ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಶುಕ್ರವಾರ ಇಲ್ಲಿ ಸವಾಲು ಹಾಕಿದರು.</p>.<p>ಬಿಜೆಪಿಯವರು ಉಪಚುನಾವಣೆಗೆ ₹ 750 ಕೋಟಿ ಖರ್ಚು ಮಾಡಿದ್ದಾರೆ ಎಂಬ ಜೆಡಿಎಸ್ ಶಾಸಕ ರೇವಣ್ಣ ಆರೋಪಕ್ಕೆ ತಿರುಗೇಟು ನೀಡಿದ ಅವರು, ‘ಚುನಾವಣೆಯಲ್ಲಿ ನಾವು ಗೆದ್ದಿರುವುದನ್ನು ಅವರು ಒಪ್ಪಿಕೊಳ್ಳಬೇಕು’ ಎಂದು ಕುಟುಕಿದರು.</p>.<p>‘ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ ಆಶ್ವಾಸನೆಯಂತೆ ನೂತನ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ. ಈ ಕುರಿತು ಐದಾರು ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ಕಲ್ಪಿಸುವ ಕುರಿತು ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದರು.</p>.<p>‘ಸರ್ಕಾರಕ್ಕೆ, 100 ದಿನಗಳಲ್ಲಿ ಉತ್ತಮ ಕೆಲಸ ಮಾಡಲು ಸಾಧ್ಯವಾಗಿರಲಿಲ್ಲ. ಈಗ ರಾಜ್ಯದಲ್ಲಿ ಸ್ಥಿರ ಸರ್ಕಾರವಿದ್ದು, ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಕೇಂದ್ರ ಸರ್ಕಾರ ಕೂಡ ಅನುದಾನ ಒದಗಿಸುವಲ್ಲಿ ಯಾವುದೇ ತಾರತಮ್ಯ ಎಸಗುತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>